ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನ ನೀರಿನ ಕಥೆ ಹೇಳುವ ಕ್ಯಾಲೆಂಡರ್‌

Last Updated 29 ಜನವರಿ 2021, 18:50 IST
ಅಕ್ಷರ ಗಾತ್ರ

ಬೆಂಗಳೂರು: ಹೊಸ ವರ್ಷಕ್ಕೆ ಜಲಮಂಡಳಿಯು ಕ್ಯಾಲೆಂಡರ್‌ ಬಿಡುಗಡೆ ಮಾಡಿದ್ದು, ನಗರದ ನೀರು ಸರಬರಾಜಿನ ಇತಿಹಾಸ, ಜಲ ಸಂರಕ್ಷಣೆಯ ಮಹತ್ವ ಮತ್ತು ನಿರ್ವಹಣೆಯ ವಿಧಾನಗಳ ಮಾಹಿತಿಯನ್ನು ಇದರಲ್ಲಿ ನೀಡಿದೆ.

1896ರಲ್ಲಿ ಹೆಸರಘಟ್ಟದಿಂದ ನಗರಕ್ಕೆ ನೀರು ಸರಬರಾಜಾಗುತ್ತಿದ್ದುದರಿಂದ ಹಿಡಿದು, 1933ರಲ್ಲಿ ತಿಪ್ಪಗೊಂಡನಹಳ್ಳಿ, ನಂತರ ಕಾವೇರಿ ಒಂದರಿಂದ ನಾಲ್ಕನೇ ಹಂತದವರೆಗೆ ಸಾಗಿಬಂದ ಕಾಮಗಾರಿಯ ವಿವರ ಮತ್ತು ಈಗ ಪ್ರಗತಿಯಲ್ಲಿರುವ ಕಾವೇರಿ ಐದನೇ ಹಂತದ ಯೋಜನೆಗಳ ಮಾಹಿತಿ ಇದರಲ್ಲಿದೆ.

ಜೀವಸಂಕುಲದಲ್ಲಿ ನೀರಿನ ಸಂರಕ್ಷಣೆ, ಮಳೆ ನೀರು ಸಂಗ್ರಹಿಸುವ ಮತ್ತು ಅಂತರ್ಜಲ ಮರುಪೂರಣದ ಮಹತ್ವ, ತ್ಯಾಜ್ಯ ನೀರು ನಿರ್ವಹಣೆಯಲ್ಲಿ ಬಳಸುತ್ತಿರುವ ತಂತ್ರಜ್ಞಾನದ ಮಾಹಿತಿಯೂ ಈ ಕ್ಯಾಲೆಂಡರ್‌ನಲ್ಲಿದ್ದು, ಇದಕ್ಕೆ ಪೂರಕವಾಗಿ ಅತ್ಯಾಕರ್ಷಕವಾದ ಫೋಟೊಗಳನ್ನು ಹಾಕಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT