‘ಪ್ರಜಾವಾಣಿ’ಯಲ್ಲಿ ಶುಕ್ರವಾರ ಪ್ರಕಟವಾದ ‘ಕಾವೇರಿಯಿಂದ ತುಂಗಾನಗರದ ನೆಮ್ಮದಿ ಭಂಗ’ ಎಂಬ ವರದಿಗೆ ಪ್ರತಿಕ್ರಿಯೆ ನೀಡಿರುವ ಜಲ ಮಂಡಳಿ, ‘ಕಾವೇರಿ 5ನೇ ಹಂತದ ಯೋಜನೆಯಡಿ ಪೈಪ್ಲೈನ್ ಅಳವಡಿಕೆ ಮಾಡಲಾಗುತ್ತಿದೆ. ತುಂಗಾನಗರ ಮುಖ್ಯರಸ್ತೆಯಲ್ಲಿ ಕಾಮಗಾರಿಯುತ್ವರಿತಗತಿಯಲ್ಲಿ ಪ್ರಗತಿ ಹಂತದಲ್ಲಿದ್ದು, ಸಮಾನಾಂತರವಾಗಿ ರಸ್ತೆ ಮರು ನಿರ್ಮಾಣ ಕಾಮಗಾರಿ ಸಹ ಕೈಗೊಳ್ಳಲಾಗುತ್ತಿದೆ. ದೂಳು ತುಂಬಿಕೊಳ್ಳುತ್ತಿರುವುದನ್ನು ತಡೆಯಲು ನಿರಂತರವಾಗಿ ನೀರು ಸಿಂಪರಣೆ ಮಾಡಲಾಗುತ್ತಿದೆ’ ಎಂದು ತಿಳಿಸಿದೆ.