ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜಲಮಂಡಳಿ ಸಿಬ್ಬಂದಿಗೆ ವಿಮೆ ನೀಡಿ’

Last Updated 4 ಜುಲೈ 2020, 22:00 IST
ಅಕ್ಷರ ಗಾತ್ರ

ಬೆಂಗಳೂರು:ಜಲಮಂಡಳಿಯ ಕಾಯಂ ಹಾಗೂ ಹೊರಗುತ್ತಿಗೆ ನೌಕರರು, ಅಧಿಕಾರಿಗಳು ಹಾಗೂ ಅವರ ಕುಟುಂಬ ಸದಸ್ಯರಿಗೆ ಕೊರೊನಾ ಸೋಂಕು ತಗುಲಿದರೆ ಆಸ್ಪತ್ರೆ ವೆಚ್ಚವನ್ನು ಜಲಮಂಡಳಿಯೇ ಭರಿಸಿ, ಅವರಿಗೆ ವಿಮೆ ನೀಡಬೇಕು ಎಂದು ಜಲಮಂಡಳಿ ನೌಕರರ ಸಂಘ ಸರ್ಕಾರಕ್ಕೆ ಮನವಿ ಮಾಡಿದೆ.

ಸಂಘದ ಅಧ್ಯಕ್ಷ ರುದ್ರೇಗೌಡ ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದು, ‘ಜಲಮಂಡಳಿಯ ಸಹಾಯಕ ಎಂಜಿನಿಯರ್‌, ಕಿರಿಯ ಎಂಜಿನಿಯರ್, ಜಲಪರಿವೀಕ್ಷಕರು, ಮಾಪಕ ಓದುಗರು, ಒಳಚರಂಡಿ ಕೆಲಸಗಾರರು ಸೇರಿ ಎಲ್ಲ ಸಿಬ್ಬಂದಿ ಹೊರಗೆ ಓಡಾಡಿ ಕೆಲಸ ಮಾಡಬೇಕಾದ ಅನಿವಾರ್ಯ ಇದೆ. ಇವರಿಗೆ ಸೋಂಕು ತಗಲುವ ಸಾಧ್ಯತೆ ಹೆಚ್ಚು. ಕೋವಿಡ್-19 ವಿಮೆಯನ್ನು ಮಂಡಳಿಯ ನೌಕರರಿಗೂ ಅನ್ವಯಿಸಬೇಕು’ ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT