‘ವಾಲ್ ಮ್ಯಾನ್, ಚಾಲಕರು, ನೀರುಗಂಟಿ, ಎಟಿಎಂ ಹಾಗೂ ದೂರವಾಣಿ ಆಪರೇಟರ್ಗಳು, ಪಂಪ್ಹೌಸ್ ಆಪರೇಟರ್ಗಳು ಹಾಗೂ ಇತರೆ ಸಿಬ್ಬಂದಿ ಹಗಲಿರುಳೆನ್ನದೆ ದುಡಿಯುತ್ತಿರುವುದರಿಂದ ಬೆಂಗಳೂರಿನ ನಿವಾಸಿಗಳು ನೆಮ್ಮದಿಯ ಜೀವನ ಸಾಗಿಸುತ್ತಿದ್ದಾರೆ. ಹೀಗಿದ್ದರೂ ನಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತಿಲ್ಲ. ಅಧಿಕಾರಿಗಳ ದರ್ಪದ ವಿರುದ್ಧ ಧ್ವನಿ ಎತ್ತುವವರನ್ನು ಏಕಾಏಕಿ ವರ್ಗಾವಣೆ ಮಾಡಲಾಗುತ್ತಿದೆ’ ಎಂದು ಪ್ರತಿಭಟನಕಾರರು ದೂರಿದರು.