<p><strong>ಬೆಂಗಳೂರು</strong>: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ಮಾಡಿಸಿ, ಉಪಚುನಾವಣೆ ಗೆಲ್ಲುವ ಅಗತ್ಯವಿಲ್ಲ’ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸಿಬಿಐ ಸ್ವಾಯತ್ತ ಸಂಸ್ಥೆಯಾಗಿದ್ದು, 2017 ಮತ್ತು 2019 ರಲ್ಲಿ ಅವರ ವಿರುದ್ಧದ ಪ್ರಕರಣಗಳ ಮುಂದುವರಿದ ಭಾಗವಾಗಿ ಶೋಧ ನಡೆದಿದೆ. ಬಿಜೆಪಿಗೂ ಈ ದಾಳಿಗೂ ಸಂಬಂಧವಿಲ್ಲ’ ಎಂದರು.</p>.<p>‘ಹಿಂದೆ ಯುಪಿಎ ಸರ್ಕಾರ ಇದ್ದಾಗ ಜನಾರ್ದನ ರೆಡ್ಡಿ ಅವರ ಮನೆ, ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಮತ್ತು ಇತರ ತನಿಖಾ ಸಂಸ್ಥೆಗಳು ದಾಳಿ ನಡೆಸಿದವು. ಅದನ್ನು ಕಾಂಗ್ರೆಸ್ ಪಕ್ಷವೇ ಮಾಡಿಸಿದ್ದು ಎಂದು ಹೇಳಲು ಆಗುತ್ತದೆಯೇ’ ಎಂದು ಅಶೋಕ ಪ್ರಶ್ನಿಸಿದರು.</p>.<p>‘ಶಿರಾ ಉಪಚುನಾವಣೆಯಲ್ಲಿ ಆರ್ಎಸ್ಎಸ್ನವರು ₹50 ಕೋಟಿ ಖರ್ಚು ಮಾಡಲು ಸಿದ್ಧತೆ ನಡೆಸಿದ್ದಾರೆ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ದೂರಿದ್ದಾರೆ. ಅವರ ಮಾತಿನಲ್ಲಿ ಯಾವುದೇ ಹುರುಳಿಲ್ಲ. ಆರ್ಎಸ್ಎಸ್ ಒಂದು ಸೇವಾ ಸಂಘಟನೆಯೇ ಹೊರತು ರಾಜಕೀಯ ಸಂಘಟನೆಯಲ್ಲ’ ಎಂದು ಅವರು ಹೇಳಿದರು.<br /><br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ಮಾಡಿಸಿ, ಉಪಚುನಾವಣೆ ಗೆಲ್ಲುವ ಅಗತ್ಯವಿಲ್ಲ’ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸಿಬಿಐ ಸ್ವಾಯತ್ತ ಸಂಸ್ಥೆಯಾಗಿದ್ದು, 2017 ಮತ್ತು 2019 ರಲ್ಲಿ ಅವರ ವಿರುದ್ಧದ ಪ್ರಕರಣಗಳ ಮುಂದುವರಿದ ಭಾಗವಾಗಿ ಶೋಧ ನಡೆದಿದೆ. ಬಿಜೆಪಿಗೂ ಈ ದಾಳಿಗೂ ಸಂಬಂಧವಿಲ್ಲ’ ಎಂದರು.</p>.<p>‘ಹಿಂದೆ ಯುಪಿಎ ಸರ್ಕಾರ ಇದ್ದಾಗ ಜನಾರ್ದನ ರೆಡ್ಡಿ ಅವರ ಮನೆ, ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಮತ್ತು ಇತರ ತನಿಖಾ ಸಂಸ್ಥೆಗಳು ದಾಳಿ ನಡೆಸಿದವು. ಅದನ್ನು ಕಾಂಗ್ರೆಸ್ ಪಕ್ಷವೇ ಮಾಡಿಸಿದ್ದು ಎಂದು ಹೇಳಲು ಆಗುತ್ತದೆಯೇ’ ಎಂದು ಅಶೋಕ ಪ್ರಶ್ನಿಸಿದರು.</p>.<p>‘ಶಿರಾ ಉಪಚುನಾವಣೆಯಲ್ಲಿ ಆರ್ಎಸ್ಎಸ್ನವರು ₹50 ಕೋಟಿ ಖರ್ಚು ಮಾಡಲು ಸಿದ್ಧತೆ ನಡೆಸಿದ್ದಾರೆ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ದೂರಿದ್ದಾರೆ. ಅವರ ಮಾತಿನಲ್ಲಿ ಯಾವುದೇ ಹುರುಳಿಲ್ಲ. ಆರ್ಎಸ್ಎಸ್ ಒಂದು ಸೇವಾ ಸಂಘಟನೆಯೇ ಹೊರತು ರಾಜಕೀಯ ಸಂಘಟನೆಯಲ್ಲ’ ಎಂದು ಅವರು ಹೇಳಿದರು.<br /><br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>