ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ‘ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಕನಿಷ್ಠ 140 ರಿಂದ 150 ಶಾಸಕರನ್ನು ಗೆಲ್ಲಿಸುವುದೇ ನಮ್ಮೆಲ್ಲ ಗುರಿಯಾಗಿದೆ’ ಎಂದು ಹೇಳಿದರು. ‘ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಾಗ ವೀರಶೈವ ಸಮಾಜದ ಕುರಿತು ಯಾರ್ಯಾರು ಯಾವ ರೀತಿ ನಡೆದುಕೊಂಡಿದ್ದಾರೆ ಎಂಬುದು ಗೊತ್ತಿದೆ. ಆದ್ದರಿಂದ ಸಿದ್ದರಾಮಯ್ಯ ಅವರ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ’ ಎಂದರು.