<p><strong>ಬೆಂಗಳೂರು:</strong> ಬ್ಯಾಡರಹಳ್ಳಿ ಠಾಣೆಯ ವ್ಯಾಪ್ತಿಯಲ್ಲಿ ಒಂದೇ ಕುಟುಂಬದ ಕೂಸು ಸೇರಿ ಐವರು ಮೃತಪಟ್ಟ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಮೃತ ಮಧುಸಾಗರ್ ಬರೆದಿದ್ದಾರೆ ಎನ್ನಲಾದ ಮರಣ ಪತ್ರ ಪೊಲೀಸರಿಗೆ ಸಿಕ್ಕಿದ್ದು, ತಂದೆ ಶಂಕರ್ ಮೇಲೆಯೇ ಇದೀಗ ಅನುಮಾನ ವ್ಯಕ್ತವಾಗುತ್ತಿದೆ.</p>.<p>ತಿಗಳರಪಾಳ್ಯದ ಐಷಾರಾಮಿ ಮನೆಯಲ್ಲಿ ಭಾರತಿ (51), ಅವರ ಮಕ್ಕಳಾದ ಸಿಂಚನಾಕುಮಾರಿ (34), ಸಿಂಧುರಾಣಿ (33) ಹಾಗೂ ಮಧುಸಾಗರ್ (25) ನೇಣು ಹಾಕಿಕೊಂಡು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದರು.</p>.<p>ಘಟನೆ ನಡೆದ ಮನೆಯಲ್ಲಿ ಪೊಲೀಸರು ಭಾನುವಾರ ಶೋಧ ನಡೆಸಿದ್ದರು. ಮೂರು ಮರಣ ಪತ್ರಗಳು ಸಿಕ್ಕಿದ್ದವು. ಮಧುಸಾಗರ್ ಕೊಠಡಿಯಲ್ಲಿ ಸಿಕ್ಕಿರುವ ಮರಣಪತ್ರ, ಪ್ರಕರಣಕ್ಕೆ ಹೊಸ ಆಯಾಮ ನೀಡಿದೆ.</p>.<p>‘ನನ್ನ ತಂದೆ ಸ್ವಾರ್ಥಿ. ಐವರು ಮಹಿಳೆಯರ ಜೊತೆ ಅಕ್ರಮ ಸಂಬಂಧವಿಟ್ಟುಕೊಂಡಿದ್ದಾರೆ. ಆ ಪೈಕಿ ಮಹಿಳೆಯೊಬ್ಬರ ಮಗಳನ್ನು ಮದುವೆಯಾಗುವಂತೆ ನನ್ನನ್ನು ಒತ್ತಾಯಿಸುತ್ತಿದ್ದರು’ ಎಂದು ಮಧುಸಾಗರ್ ಮರಣಪತ್ರದಲ್ಲಿ ಬರೆದಿರುವುದಾಗಿ ಪೊಲೀಸ್ ಮೂಲಗಳು ಹೇಳಿವೆ.</p>.<p>‘ವಿಪರೀತ ಕುಡಿಯುತ್ತಿದ್ದ ತಂದೆ, ತಾಯಿ ಜೊತೆ ಜಗಳ ಮಾಡುತ್ತಿದ್ದರು. ಹಲ್ಲೆಯನ್ನೂ ಮಾಡಿದ್ದರು. ಬಾಯಲ್ಲಿ ಚಪ್ಪಲಿ ಇಟ್ಟು ಅವಮಾನಿಸುತ್ತಿದ್ದರು. ನನ್ನ ಅಕ್ಕಂದಿರ ಜೀವನವನ್ನೂ ತಂದೆಯೇ ಹಾಳು ಮಾಡಿದರು’ ಎಂಬ ಅಂಶವೂ ಪತ್ರದಲ್ಲಿರುವುದಾಗಿ ಮೂಲಗಳು ತಿಳಿಸಿವೆ.</p>.<p><strong>ಶಂಕರ್, ಅಳಿಯಂದಿರ ವಿಚಾರಣೆ</strong>: ಮರಣಪತ್ರಗಳು ಪತ್ತೆಯಾಗುತ್ತಿದ್ದಂತೆ ಪೊಲೀಸರು, ಶಂಕರ್ ಹಾಗೂ ಅವರ ಅಳಿಯಂದಿರಾದ ಪ್ರವೀಣ್ ಹಾಗೂ ಶ್ರೀಕಾಂತ್ ಅವರನ್ನು ಸೋಮವಾರ ವಿಚಾರಣೆಗೆ ಒಳಪಡಿಸಿದರು.</p>.<p>ಮಕ್ಕಳ ಮರಣಪತ್ರದ ಬಗ್ಗೆ ಪ್ರತಿಕ್ರಿಯಿಸಿದ ಹಲ್ಲೇಗೆರೆ ಶಂಕರ್, ‘ಘಟನೆಯ ತನಿಖೆ ನಡೆಯುತ್ತಿದೆ. ಪೊಲೀಸ್ ಪ್ರಕ್ರಿಯೆ ಭಾಗವಾಗಿ ವಿಚಾರಣೆಗೆ ಹಾಜರಾಗಿದ್ದೇನೆ. ಮರಣಪತ್ರದಲ್ಲಿ ಇರುವುದು ಸುಳ್ಳು. ಉಳಿದೆಲ್ಲ ಮಾಹಿತಿ ಹಂತಹಂತವಾಗಿ ಎಲ್ಲರಿಗೂ ತಿಳಿಯುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬ್ಯಾಡರಹಳ್ಳಿ ಠಾಣೆಯ ವ್ಯಾಪ್ತಿಯಲ್ಲಿ ಒಂದೇ ಕುಟುಂಬದ ಕೂಸು ಸೇರಿ ಐವರು ಮೃತಪಟ್ಟ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಮೃತ ಮಧುಸಾಗರ್ ಬರೆದಿದ್ದಾರೆ ಎನ್ನಲಾದ ಮರಣ ಪತ್ರ ಪೊಲೀಸರಿಗೆ ಸಿಕ್ಕಿದ್ದು, ತಂದೆ ಶಂಕರ್ ಮೇಲೆಯೇ ಇದೀಗ ಅನುಮಾನ ವ್ಯಕ್ತವಾಗುತ್ತಿದೆ.</p>.<p>ತಿಗಳರಪಾಳ್ಯದ ಐಷಾರಾಮಿ ಮನೆಯಲ್ಲಿ ಭಾರತಿ (51), ಅವರ ಮಕ್ಕಳಾದ ಸಿಂಚನಾಕುಮಾರಿ (34), ಸಿಂಧುರಾಣಿ (33) ಹಾಗೂ ಮಧುಸಾಗರ್ (25) ನೇಣು ಹಾಕಿಕೊಂಡು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದರು.</p>.<p>ಘಟನೆ ನಡೆದ ಮನೆಯಲ್ಲಿ ಪೊಲೀಸರು ಭಾನುವಾರ ಶೋಧ ನಡೆಸಿದ್ದರು. ಮೂರು ಮರಣ ಪತ್ರಗಳು ಸಿಕ್ಕಿದ್ದವು. ಮಧುಸಾಗರ್ ಕೊಠಡಿಯಲ್ಲಿ ಸಿಕ್ಕಿರುವ ಮರಣಪತ್ರ, ಪ್ರಕರಣಕ್ಕೆ ಹೊಸ ಆಯಾಮ ನೀಡಿದೆ.</p>.<p>‘ನನ್ನ ತಂದೆ ಸ್ವಾರ್ಥಿ. ಐವರು ಮಹಿಳೆಯರ ಜೊತೆ ಅಕ್ರಮ ಸಂಬಂಧವಿಟ್ಟುಕೊಂಡಿದ್ದಾರೆ. ಆ ಪೈಕಿ ಮಹಿಳೆಯೊಬ್ಬರ ಮಗಳನ್ನು ಮದುವೆಯಾಗುವಂತೆ ನನ್ನನ್ನು ಒತ್ತಾಯಿಸುತ್ತಿದ್ದರು’ ಎಂದು ಮಧುಸಾಗರ್ ಮರಣಪತ್ರದಲ್ಲಿ ಬರೆದಿರುವುದಾಗಿ ಪೊಲೀಸ್ ಮೂಲಗಳು ಹೇಳಿವೆ.</p>.<p>‘ವಿಪರೀತ ಕುಡಿಯುತ್ತಿದ್ದ ತಂದೆ, ತಾಯಿ ಜೊತೆ ಜಗಳ ಮಾಡುತ್ತಿದ್ದರು. ಹಲ್ಲೆಯನ್ನೂ ಮಾಡಿದ್ದರು. ಬಾಯಲ್ಲಿ ಚಪ್ಪಲಿ ಇಟ್ಟು ಅವಮಾನಿಸುತ್ತಿದ್ದರು. ನನ್ನ ಅಕ್ಕಂದಿರ ಜೀವನವನ್ನೂ ತಂದೆಯೇ ಹಾಳು ಮಾಡಿದರು’ ಎಂಬ ಅಂಶವೂ ಪತ್ರದಲ್ಲಿರುವುದಾಗಿ ಮೂಲಗಳು ತಿಳಿಸಿವೆ.</p>.<p><strong>ಶಂಕರ್, ಅಳಿಯಂದಿರ ವಿಚಾರಣೆ</strong>: ಮರಣಪತ್ರಗಳು ಪತ್ತೆಯಾಗುತ್ತಿದ್ದಂತೆ ಪೊಲೀಸರು, ಶಂಕರ್ ಹಾಗೂ ಅವರ ಅಳಿಯಂದಿರಾದ ಪ್ರವೀಣ್ ಹಾಗೂ ಶ್ರೀಕಾಂತ್ ಅವರನ್ನು ಸೋಮವಾರ ವಿಚಾರಣೆಗೆ ಒಳಪಡಿಸಿದರು.</p>.<p>ಮಕ್ಕಳ ಮರಣಪತ್ರದ ಬಗ್ಗೆ ಪ್ರತಿಕ್ರಿಯಿಸಿದ ಹಲ್ಲೇಗೆರೆ ಶಂಕರ್, ‘ಘಟನೆಯ ತನಿಖೆ ನಡೆಯುತ್ತಿದೆ. ಪೊಲೀಸ್ ಪ್ರಕ್ರಿಯೆ ಭಾಗವಾಗಿ ವಿಚಾರಣೆಗೆ ಹಾಜರಾಗಿದ್ದೇನೆ. ಮರಣಪತ್ರದಲ್ಲಿ ಇರುವುದು ಸುಳ್ಳು. ಉಳಿದೆಲ್ಲ ಮಾಹಿತಿ ಹಂತಹಂತವಾಗಿ ಎಲ್ಲರಿಗೂ ತಿಳಿಯುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>