<p><strong>ಯಲಹಂಕ:</strong> ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಜಕ್ಕೂರಿನ ಅರ್ಕಾವತಿ ಬಡಾವಣೆಯ ಮೈದಾನದಲ್ಲಿ ಜನವರಿ 17 ಮತ್ತು 18ರಂದು ಸಂಕ್ರಾಂತಿ ‘ಸುಗ್ಗಿ-ಹುಗ್ಗಿ ಸಾಂಸ್ಕೃತಿಕ ಸಂಭ್ರಮ ಆಚರಣೆಯ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ಆಯೋಜಕಿ ಮೀನಾಕ್ಷಿ ಕೃಷ್ಣಬೈರೇಗೌಡ ತಿಳಿಸಿದ್ದಾರೆ.</p>.<p>ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೆಬಿಜಿ ಸ್ವಯಸೇವಕರ ಸಂಘದ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.</p>.<p>ಶನಿವಾರ ‘ಬರ್ಫಿ ಬ್ಯಾಂಡ್ ತಂಡದಿಂದ ಸಂಗೀತ ಕಾರ್ಯಕ್ರಮ, ಆಹಾರ ಮಳಿಗೆಗಳು ಮತ್ತು ವಾಸವಿ ಅವರೆಬೇಳೆ ಮೇಳ ಸೇರಿದಂತೆ ರಂಗೋಲಿ ಸ್ಪರ್ಧೆ, ಕಬಡ್ಡಿ ಪಂದ್ಯಗಳು, ಮಡಿಕೆ ಒಡೆಯುವ, ಚಿತ್ರಕಲೆ, ಜಾನಪದ ನೃತ್ಯ ಹಾಗೂ ಹಗ್ಗ-ಜಗ್ಗಾಟ ಸ್ಪರ್ಧೆಗಳ ಜೊತೆಗೆ ಎತ್ತಿನಗಾಡಿ ಸವಾರಿಯೂ ಇರಲಿದೆ.</p>.<p>ಭಾನುವಾರ ಸಂಜೆ 6 ಗಂಟೆಗೆ ಪ್ರಭಾತ್ ಆರ್ಟ್ಸ್ ಇಂಟರ್ ನ್ಯಾಷನಲ್ ತಂಡದವರಿಂದ ಮಹಾಭಾರತದ ಕುರುಕ್ಷೇತ್ರ ಯುದ್ಧ ಆಧಾರಿತ ‘18 ದಿನಗಳು ಎಂಬ ನೃತ್ಯ ನಾಟಕ ಏರ್ಪಡಿಸಲಾಗಿದೆ. ಇದರಲ್ಲಿ ಕುರುಕ್ಷೇತ್ರದ ಮುಖ್ಯ ಘಟನೆಗಳನ್ನು 70ಕ್ಕೂ ಹೆಚ್ಚು ಕಲಾವಿದರು ವೇದಿಕೆಯ ಮೇಲೆ ತರಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಜಕ್ಕೂರಿನ ಅರ್ಕಾವತಿ ಬಡಾವಣೆಯ ಮೈದಾನದಲ್ಲಿ ಜನವರಿ 17 ಮತ್ತು 18ರಂದು ಸಂಕ್ರಾಂತಿ ‘ಸುಗ್ಗಿ-ಹುಗ್ಗಿ ಸಾಂಸ್ಕೃತಿಕ ಸಂಭ್ರಮ ಆಚರಣೆಯ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ಆಯೋಜಕಿ ಮೀನಾಕ್ಷಿ ಕೃಷ್ಣಬೈರೇಗೌಡ ತಿಳಿಸಿದ್ದಾರೆ.</p>.<p>ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೆಬಿಜಿ ಸ್ವಯಸೇವಕರ ಸಂಘದ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.</p>.<p>ಶನಿವಾರ ‘ಬರ್ಫಿ ಬ್ಯಾಂಡ್ ತಂಡದಿಂದ ಸಂಗೀತ ಕಾರ್ಯಕ್ರಮ, ಆಹಾರ ಮಳಿಗೆಗಳು ಮತ್ತು ವಾಸವಿ ಅವರೆಬೇಳೆ ಮೇಳ ಸೇರಿದಂತೆ ರಂಗೋಲಿ ಸ್ಪರ್ಧೆ, ಕಬಡ್ಡಿ ಪಂದ್ಯಗಳು, ಮಡಿಕೆ ಒಡೆಯುವ, ಚಿತ್ರಕಲೆ, ಜಾನಪದ ನೃತ್ಯ ಹಾಗೂ ಹಗ್ಗ-ಜಗ್ಗಾಟ ಸ್ಪರ್ಧೆಗಳ ಜೊತೆಗೆ ಎತ್ತಿನಗಾಡಿ ಸವಾರಿಯೂ ಇರಲಿದೆ.</p>.<p>ಭಾನುವಾರ ಸಂಜೆ 6 ಗಂಟೆಗೆ ಪ್ರಭಾತ್ ಆರ್ಟ್ಸ್ ಇಂಟರ್ ನ್ಯಾಷನಲ್ ತಂಡದವರಿಂದ ಮಹಾಭಾರತದ ಕುರುಕ್ಷೇತ್ರ ಯುದ್ಧ ಆಧಾರಿತ ‘18 ದಿನಗಳು ಎಂಬ ನೃತ್ಯ ನಾಟಕ ಏರ್ಪಡಿಸಲಾಗಿದೆ. ಇದರಲ್ಲಿ ಕುರುಕ್ಷೇತ್ರದ ಮುಖ್ಯ ಘಟನೆಗಳನ್ನು 70ಕ್ಕೂ ಹೆಚ್ಚು ಕಲಾವಿದರು ವೇದಿಕೆಯ ಮೇಲೆ ತರಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>