<p><strong>ಬೆಂಗಳೂರು</strong>: ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಶಾಸಕ ಬೈರತಿ ಬಸವರಾಜ್ ಪೊಲೀಸರು ನೀಡಿರುವ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಕದ ತಟ್ಟಿದ್ದಾರೆ.</p><p>ಈ ಕುರಿತ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಕೋರಿ ಬೈರತಿ ಬಸವರಾಜ್ ಪರ ಪದಾಂಕಿತ ಹಿರಿಯ ವಕೀಲ ಸಂದೇಶ್ ಜೆ.ಚೌಟ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠಕ್ಕೆ ಶುಕ್ರವಾರ ಬೆಳಿಗ್ಗೆ ಮೆಮೊ ಸಲ್ಲಿಸಿದರು.</p><p>ಈ ಮನವಿಗೆ ರಾಜ್ಯ ಪ್ರಾಸಿಕ್ಯೂಟರ್ ಬಿ.ಎ.ಬೆಳ್ಳಿಯಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿ, "ಅರ್ಜಿದಾರರು ತಮಗೆ ನೋಟಿಸ್ ನೀಡಿದ್ದನ್ನೇ ಪ್ರಶ್ನಿಸಿ ಹೈಕೋರ್ಟ್ ಗೆ ಬಂದಿದ್ದಾರೆ. ಈ ಪ್ರಕರಣದ ತುರ್ತು ವಿಚಾರಣೆ ಅಗತ್ಯವಿಲ್ಲ" ಎಂದು ಪ್ರತಿಪಾದಿಸಿದರು.</p><p>ಇದನ್ನು ಒಪ್ಪದ ಚೌಟ, "ನಮ್ಮ ಅರ್ಜಿಯಲ್ಲೇನಿದೆ ಎಂಬುದನ್ನು ತಿಳಿಯುವ ಮೊದಲೇ ಪ್ರಾಸಿಕ್ಯೂಟರ್ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ತುರ್ತು ವಿಚಾರಣೆ ಕೋರಿಕೆಗೆ ಈ ರೀತಿಯ ಆಕ್ಷೇಪ ಸರಿಯಲ್ಲ. ಬೈರತಿ ಬಸವರಾಜ್ ವಿರುದ್ಧದ ಎಫ್ಐಆರ್ ನಲ್ಲಿ ಹುರುಳಿಲ್ಲ. ದೂರುದಾರರು ಬೈರತಿ ಬಸವರಾಜ್ ಹೆಸರನ್ನೇ ಎಲ್ಲೂ ಹೇಳಿಲ್ಲ. ಹೀಗೆಂದು ಕೊಲೆಯಾದ ವ್ಯಕ್ತಿಯ ತಾಯಿಯೇ ಸ್ಪಷ್ಟಪಡಿಸಿದ್ದಾರೆ. ಆದರೂ, ಎಫ್ಐಆರ್ ನಲ್ಲಿ ಅವರ ಹೆಸರು ಸೇರಿಸಲಾಗಿದೆ" ಎಂದು ದೂರಿದರು.</p><p>ಇದನ್ನು ಆಲಿಸಿದ ನ್ಯಾಯಪೀಠ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸುವುದಾಗಿ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಶಾಸಕ ಬೈರತಿ ಬಸವರಾಜ್ ಪೊಲೀಸರು ನೀಡಿರುವ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಕದ ತಟ್ಟಿದ್ದಾರೆ.</p><p>ಈ ಕುರಿತ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಕೋರಿ ಬೈರತಿ ಬಸವರಾಜ್ ಪರ ಪದಾಂಕಿತ ಹಿರಿಯ ವಕೀಲ ಸಂದೇಶ್ ಜೆ.ಚೌಟ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠಕ್ಕೆ ಶುಕ್ರವಾರ ಬೆಳಿಗ್ಗೆ ಮೆಮೊ ಸಲ್ಲಿಸಿದರು.</p><p>ಈ ಮನವಿಗೆ ರಾಜ್ಯ ಪ್ರಾಸಿಕ್ಯೂಟರ್ ಬಿ.ಎ.ಬೆಳ್ಳಿಯಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿ, "ಅರ್ಜಿದಾರರು ತಮಗೆ ನೋಟಿಸ್ ನೀಡಿದ್ದನ್ನೇ ಪ್ರಶ್ನಿಸಿ ಹೈಕೋರ್ಟ್ ಗೆ ಬಂದಿದ್ದಾರೆ. ಈ ಪ್ರಕರಣದ ತುರ್ತು ವಿಚಾರಣೆ ಅಗತ್ಯವಿಲ್ಲ" ಎಂದು ಪ್ರತಿಪಾದಿಸಿದರು.</p><p>ಇದನ್ನು ಒಪ್ಪದ ಚೌಟ, "ನಮ್ಮ ಅರ್ಜಿಯಲ್ಲೇನಿದೆ ಎಂಬುದನ್ನು ತಿಳಿಯುವ ಮೊದಲೇ ಪ್ರಾಸಿಕ್ಯೂಟರ್ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ತುರ್ತು ವಿಚಾರಣೆ ಕೋರಿಕೆಗೆ ಈ ರೀತಿಯ ಆಕ್ಷೇಪ ಸರಿಯಲ್ಲ. ಬೈರತಿ ಬಸವರಾಜ್ ವಿರುದ್ಧದ ಎಫ್ಐಆರ್ ನಲ್ಲಿ ಹುರುಳಿಲ್ಲ. ದೂರುದಾರರು ಬೈರತಿ ಬಸವರಾಜ್ ಹೆಸರನ್ನೇ ಎಲ್ಲೂ ಹೇಳಿಲ್ಲ. ಹೀಗೆಂದು ಕೊಲೆಯಾದ ವ್ಯಕ್ತಿಯ ತಾಯಿಯೇ ಸ್ಪಷ್ಟಪಡಿಸಿದ್ದಾರೆ. ಆದರೂ, ಎಫ್ಐಆರ್ ನಲ್ಲಿ ಅವರ ಹೆಸರು ಸೇರಿಸಲಾಗಿದೆ" ಎಂದು ದೂರಿದರು.</p><p>ಇದನ್ನು ಆಲಿಸಿದ ನ್ಯಾಯಪೀಠ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸುವುದಾಗಿ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>