<p><strong>ಯಲಹಂಕ:</strong> ‘ನಾಡಿನ ಪರಂಪರೆ, ಕಲೆ, ಸಂಪ್ರದಾಯ, ಸಂಸ್ಕೃತಿ ರಕ್ಷಣೆ ಭಾಗವಾಗಿ ಬ್ಯಾಟರಾಯನಪುರದಲ್ಲಿ ದಸರಾ ಮಹೋತ್ಸವ ಹಾಗೂ ಯುವ ದಸರಾ ಕಾರ್ಯಕ್ರಮ ಆಯೋಜಿಸಿರುವುದು ಸ್ತುತ್ಯರ್ಹ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.</p>.<p>ಬ್ಯಾಟರಾಯನಪುರ ಕ್ಷೇತ್ರದ ವಿದ್ಯಾರಣ್ಯಪುರದ ಎನ್.ಟಿ.ಐ.ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಚ್.ಸಿ.ತಮ್ಮೇಶ್ ಗೌಡ ನೇತೃತ್ವದಲ್ಲಿ ಆಯೋಜಿಸಿದ್ದ ಯುವ ದಸರಾ ಉತ್ಸವ ಉದ್ಘಾಟಿಸಿ ಮಾತನಾಡಿ, ‘ಕೇಸರಿ ಫೌಂಡೇಷನ್ ಮೂಲಕ ನಾಲ್ಕು ವರ್ಷಗಳಿಂದ ದಸರಾ ಉತ್ಸವ ಮಾಡುತ್ತಿದ್ದಾರೆ. ಈ ಬಾರಿ ಯುವ ದಸರಾ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸುತ್ತಿರುವುದು ಸಂತೋಷದ ಸಂಗತಿ’ ಎಂದರು.</p>.<p>ಶಾಸಕ ಎಸ್. ಆರ್ ವಿಶ್ವನಾಥ್ ಮಾತನಾಡಿದರು .ಬ್ಯಾಟರಾಯನಪುರ ಕ್ಷೇತ್ರವ್ಯಾಪ್ತಿಯ ವಿವಿಧ ಬಡಾವಣೆಗಳ 101 ದೇವರುಗಳ ಉತ್ಸವಕ್ಕೆ ಕೇಂದ್ರಸಚಿವೆ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು.</p>.<p>ವಿದ್ಯಾರಣ್ಯಪುರದಿಂದ ಹೊರಟ ದೇವರುಗಳ ಉತ್ಸವ ತಿಂಡ್ಲು, ಕೊಡಿಗೇಹಳ್ಳಿ ಮತ್ತು ಸಹಕಾರನಗರ ಮಾರ್ಗವಾಗಿ ಬ್ಯಾಟರಾಯನಪುರ ತಲುಪಿತು.</p>.<p>ಮುಖಂಡ ಎಚ್.ಸಿ.ತಮ್ಮೇಶ್ ಗೌಡ, ಚಿತ್ರನಟಿ ಅಮೂಲ್ಯ ಜಗದೀಶ್, ಬ್ಯಾಟರಾಯನಪುರ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಹನುಮಂತಗೌಡ, ನಗರ ಮಂಡಲ ಅಧ್ಯಕ್ಷ ಕೃಷ್ಣಮೂರ್ತಿ, ಪಿ.ಕೆ.ರಾಜಗೋಪಾಲ್, ಶರಣು ತಳ್ಳಿಕೇರಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ‘ನಾಡಿನ ಪರಂಪರೆ, ಕಲೆ, ಸಂಪ್ರದಾಯ, ಸಂಸ್ಕೃತಿ ರಕ್ಷಣೆ ಭಾಗವಾಗಿ ಬ್ಯಾಟರಾಯನಪುರದಲ್ಲಿ ದಸರಾ ಮಹೋತ್ಸವ ಹಾಗೂ ಯುವ ದಸರಾ ಕಾರ್ಯಕ್ರಮ ಆಯೋಜಿಸಿರುವುದು ಸ್ತುತ್ಯರ್ಹ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.</p>.<p>ಬ್ಯಾಟರಾಯನಪುರ ಕ್ಷೇತ್ರದ ವಿದ್ಯಾರಣ್ಯಪುರದ ಎನ್.ಟಿ.ಐ.ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಚ್.ಸಿ.ತಮ್ಮೇಶ್ ಗೌಡ ನೇತೃತ್ವದಲ್ಲಿ ಆಯೋಜಿಸಿದ್ದ ಯುವ ದಸರಾ ಉತ್ಸವ ಉದ್ಘಾಟಿಸಿ ಮಾತನಾಡಿ, ‘ಕೇಸರಿ ಫೌಂಡೇಷನ್ ಮೂಲಕ ನಾಲ್ಕು ವರ್ಷಗಳಿಂದ ದಸರಾ ಉತ್ಸವ ಮಾಡುತ್ತಿದ್ದಾರೆ. ಈ ಬಾರಿ ಯುವ ದಸರಾ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸುತ್ತಿರುವುದು ಸಂತೋಷದ ಸಂಗತಿ’ ಎಂದರು.</p>.<p>ಶಾಸಕ ಎಸ್. ಆರ್ ವಿಶ್ವನಾಥ್ ಮಾತನಾಡಿದರು .ಬ್ಯಾಟರಾಯನಪುರ ಕ್ಷೇತ್ರವ್ಯಾಪ್ತಿಯ ವಿವಿಧ ಬಡಾವಣೆಗಳ 101 ದೇವರುಗಳ ಉತ್ಸವಕ್ಕೆ ಕೇಂದ್ರಸಚಿವೆ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು.</p>.<p>ವಿದ್ಯಾರಣ್ಯಪುರದಿಂದ ಹೊರಟ ದೇವರುಗಳ ಉತ್ಸವ ತಿಂಡ್ಲು, ಕೊಡಿಗೇಹಳ್ಳಿ ಮತ್ತು ಸಹಕಾರನಗರ ಮಾರ್ಗವಾಗಿ ಬ್ಯಾಟರಾಯನಪುರ ತಲುಪಿತು.</p>.<p>ಮುಖಂಡ ಎಚ್.ಸಿ.ತಮ್ಮೇಶ್ ಗೌಡ, ಚಿತ್ರನಟಿ ಅಮೂಲ್ಯ ಜಗದೀಶ್, ಬ್ಯಾಟರಾಯನಪುರ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಹನುಮಂತಗೌಡ, ನಗರ ಮಂಡಲ ಅಧ್ಯಕ್ಷ ಕೃಷ್ಣಮೂರ್ತಿ, ಪಿ.ಕೆ.ರಾಜಗೋಪಾಲ್, ಶರಣು ತಳ್ಳಿಕೇರಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>