<p><strong>ಬೆಂಗಳೂರು:</strong>ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ವಿರೋಧಿಸಿ ನಗರದಲ್ಲಿ ಪ್ರತಿಭಟನೆಗಳು ಮುಂದುವರಿದಿದ್ದು, ಶನಿವಾರವೂ ಹಲವೆಡೆ ಹೋರಾಟಗಳು ನಡೆದವು.</p>.<p>ಶಾಸಕ ಜಿಗ್ನೇಶ್ ಮೇವಾನಿ, ನಟ ನಾಸಿರುದ್ದೀನ್ ಶಾ, ಇತಿಹಾಸಕಾರ ರಾಮಚಂದ್ರ ಗುಹಾ ಸೇರಿದಂತೆ ಹಲವರು ಪ್ರತ್ಯೇಕವಾಗಿ ಬೇರೆ ಬೇರೆ ಪ್ರತಿಭಟನೆಗಳಲ್ಲಿ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದರು.</p>.<p>‘ದಮನಿತ ಸಮುದಾಯಗಳ ಮೇಲೆ ಎನ್ಪಿಆರ್–ಎನ್ಆರ್ಸಿ ದುಷ್ಪರಿಣಾಮ’ ಕುರಿತು ಸ್ವಾತಂತ್ರ್ಯ ಉದ್ಯಾನದಲ್ಲಿ ಸಾರ್ವಜನಿಕ ಸಭೆ ಆಯೋಜಿಸಲಾಗಿತ್ತು.</p>.<p>ಸಭೆಯಲ್ಲಿ ಪಾಲ್ಗೊಂಡಿದ್ದ ಜಿಗ್ನೇಶ್ ಮೇವಾನಿ, ‘ಸಿಎಎ, ಎನ್ಆರ್ಸಿ ಹಾಗೂ ಎನ್ಪಿಆರ್ ಕಾನೂನುಗಳು ಮುಸ್ಲಿಂ ಸಮುದಾಯಕ್ಕೆ ಮಾತ್ರ ಸಮಸ್ಯೆಯಾಗಿಲ್ಲ. ದಲಿತರು, ಅನಕ್ಷರಸ್ಥರು, ಅಲೆಮಾರಿಗಳು, ಬುಡಕಟ್ಟು ಜನಾಂಗದವರು, ಮಹಿಳೆಯರು ಸೇರಿದಂತೆ ಎಲ್ಲ ಧರ್ಮದ ಶೋಷಿತರ ಸಮಸ್ಯೆಯಾಗಿದೆ’ ಎಂದು ಹೇಳಿದರು.</p>.<p>‘ದೇಶದ ಬಡವರನ್ನು ಎರಡನೇ ದರ್ಜೆ ನಾಗರಿಕರನ್ನಾಗಿ ಮಾಡಿ, ಅವರಿಂದ ಬಿಟ್ಟಿ ಚಾಕರಿ ಮಾಡಿಸುವುದಕ್ಕಾಗಿಯೇ ಕೇಂದ್ರ ಸರ್ಕಾರ ಇಂಥ ಕಾನೂನುಗಳನ್ನು ಜಾರಿಗೆ ತಂದಿದೆ. ಇದರ ವಿರುದ್ಧ ದೇಶದಾದ್ಯಂತ ಹೋರಾಟ ನಡೆಯುತ್ತಿದೆ. ಹೋರಾಟ<br />ದಲ್ಲಿ ಪಾಲ್ಗೊಳ್ಳುವ ವೈದ್ಯರು, ಶಿಕ್ಷಕರು ಹಾಗೂ ಇತರರನ್ನು ಜೈಲಿಗೆ ಹಾಕಲಾಗುತ್ತಿದೆ. ದೇಶದ ಹಿತಕ್ಕಾಗಿ ನಾನೂ ಜೈಲಿಗೆ ಹೋಗಲು ಸಿದ್ಧ’ ಎಂದರು.</p>.<p>‘ಬಿಜೆಪಿ ಹಾಗೂ ಆರ್ಎಸ್ಎಸ್ನವರು ದೇಶದಲ್ಲಿ ನಿರಾಶ್ರಿತರ ಶಿಬಿರ ಸ್ಥಾಪಿಸಿದರೆ, ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಬಹುಜನತೆ ದೇಶದಾದ್ಯಂತ ಶಾಹೀನ್ ಬಾಗ್ಗಳನ್ನು ನಿರ್ಮಿಸುತ್ತಿದ್ದಾರೆ’ ಎಂದು ಹೇಳಿದರು.</p>.<p>ಇತ್ತೀಚೆಗೆ ತುಂಬರನಹಳ್ಳಿಯಲ್ಲಿ ಬಡ ಕಾರ್ಮಿಕರ ಜೋಪಡಿಗಳನ್ನು ನೆಲಸಮ ಮಾಡಿದ ದುಷ್ಕರ್ಮಿಗಳ ಕೃತ್ಯವನ್ನೂ ಜಿಗ್ನೇಶ್ ಖಂಡಿಸಿದರು.</p>.<p><strong>ಸಿನಿಮಾ, ನಾಟಕ ಪ್ರದರ್ಶನ:</strong> ‘ಸಿವಿಲ್ ಲಿಬರ್ಟೀಸ್ ಕಲೆಕ್ಟಿವ್’ ಸಂಘಟನೆ ಪದಾಧಿಕಾರಿಗಳು, ಸಿನಿಮಾ ಹಾಗೂ ನಾಟಕ ಪ್ರದರ್ಶನ ಹಮ್ಮಿಕೊಳ್ಳುವ ಮೂಲಕಕಾಯ್ದೆಯನ್ನು ವಿರೋಧಿಸಿದರು. ಸಂಗೀತ ಕಾರ್ಯಕ್ರಮನ್ನೂ ಆಯೋಜಿಸಿದ್ದರು. ಪ್ರತಿಭಟನೆಯಲ್ಲಿ ಜಿಗ್ನೇಶ್ ಮೇವಾನಿ ಪಾಲ್ಗೊಂಡಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ವಿರೋಧಿಸಿ ನಗರದಲ್ಲಿ ಪ್ರತಿಭಟನೆಗಳು ಮುಂದುವರಿದಿದ್ದು, ಶನಿವಾರವೂ ಹಲವೆಡೆ ಹೋರಾಟಗಳು ನಡೆದವು.</p>.<p>ಶಾಸಕ ಜಿಗ್ನೇಶ್ ಮೇವಾನಿ, ನಟ ನಾಸಿರುದ್ದೀನ್ ಶಾ, ಇತಿಹಾಸಕಾರ ರಾಮಚಂದ್ರ ಗುಹಾ ಸೇರಿದಂತೆ ಹಲವರು ಪ್ರತ್ಯೇಕವಾಗಿ ಬೇರೆ ಬೇರೆ ಪ್ರತಿಭಟನೆಗಳಲ್ಲಿ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದರು.</p>.<p>‘ದಮನಿತ ಸಮುದಾಯಗಳ ಮೇಲೆ ಎನ್ಪಿಆರ್–ಎನ್ಆರ್ಸಿ ದುಷ್ಪರಿಣಾಮ’ ಕುರಿತು ಸ್ವಾತಂತ್ರ್ಯ ಉದ್ಯಾನದಲ್ಲಿ ಸಾರ್ವಜನಿಕ ಸಭೆ ಆಯೋಜಿಸಲಾಗಿತ್ತು.</p>.<p>ಸಭೆಯಲ್ಲಿ ಪಾಲ್ಗೊಂಡಿದ್ದ ಜಿಗ್ನೇಶ್ ಮೇವಾನಿ, ‘ಸಿಎಎ, ಎನ್ಆರ್ಸಿ ಹಾಗೂ ಎನ್ಪಿಆರ್ ಕಾನೂನುಗಳು ಮುಸ್ಲಿಂ ಸಮುದಾಯಕ್ಕೆ ಮಾತ್ರ ಸಮಸ್ಯೆಯಾಗಿಲ್ಲ. ದಲಿತರು, ಅನಕ್ಷರಸ್ಥರು, ಅಲೆಮಾರಿಗಳು, ಬುಡಕಟ್ಟು ಜನಾಂಗದವರು, ಮಹಿಳೆಯರು ಸೇರಿದಂತೆ ಎಲ್ಲ ಧರ್ಮದ ಶೋಷಿತರ ಸಮಸ್ಯೆಯಾಗಿದೆ’ ಎಂದು ಹೇಳಿದರು.</p>.<p>‘ದೇಶದ ಬಡವರನ್ನು ಎರಡನೇ ದರ್ಜೆ ನಾಗರಿಕರನ್ನಾಗಿ ಮಾಡಿ, ಅವರಿಂದ ಬಿಟ್ಟಿ ಚಾಕರಿ ಮಾಡಿಸುವುದಕ್ಕಾಗಿಯೇ ಕೇಂದ್ರ ಸರ್ಕಾರ ಇಂಥ ಕಾನೂನುಗಳನ್ನು ಜಾರಿಗೆ ತಂದಿದೆ. ಇದರ ವಿರುದ್ಧ ದೇಶದಾದ್ಯಂತ ಹೋರಾಟ ನಡೆಯುತ್ತಿದೆ. ಹೋರಾಟ<br />ದಲ್ಲಿ ಪಾಲ್ಗೊಳ್ಳುವ ವೈದ್ಯರು, ಶಿಕ್ಷಕರು ಹಾಗೂ ಇತರರನ್ನು ಜೈಲಿಗೆ ಹಾಕಲಾಗುತ್ತಿದೆ. ದೇಶದ ಹಿತಕ್ಕಾಗಿ ನಾನೂ ಜೈಲಿಗೆ ಹೋಗಲು ಸಿದ್ಧ’ ಎಂದರು.</p>.<p>‘ಬಿಜೆಪಿ ಹಾಗೂ ಆರ್ಎಸ್ಎಸ್ನವರು ದೇಶದಲ್ಲಿ ನಿರಾಶ್ರಿತರ ಶಿಬಿರ ಸ್ಥಾಪಿಸಿದರೆ, ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಬಹುಜನತೆ ದೇಶದಾದ್ಯಂತ ಶಾಹೀನ್ ಬಾಗ್ಗಳನ್ನು ನಿರ್ಮಿಸುತ್ತಿದ್ದಾರೆ’ ಎಂದು ಹೇಳಿದರು.</p>.<p>ಇತ್ತೀಚೆಗೆ ತುಂಬರನಹಳ್ಳಿಯಲ್ಲಿ ಬಡ ಕಾರ್ಮಿಕರ ಜೋಪಡಿಗಳನ್ನು ನೆಲಸಮ ಮಾಡಿದ ದುಷ್ಕರ್ಮಿಗಳ ಕೃತ್ಯವನ್ನೂ ಜಿಗ್ನೇಶ್ ಖಂಡಿಸಿದರು.</p>.<p><strong>ಸಿನಿಮಾ, ನಾಟಕ ಪ್ರದರ್ಶನ:</strong> ‘ಸಿವಿಲ್ ಲಿಬರ್ಟೀಸ್ ಕಲೆಕ್ಟಿವ್’ ಸಂಘಟನೆ ಪದಾಧಿಕಾರಿಗಳು, ಸಿನಿಮಾ ಹಾಗೂ ನಾಟಕ ಪ್ರದರ್ಶನ ಹಮ್ಮಿಕೊಳ್ಳುವ ಮೂಲಕಕಾಯ್ದೆಯನ್ನು ವಿರೋಧಿಸಿದರು. ಸಂಗೀತ ಕಾರ್ಯಕ್ರಮನ್ನೂ ಆಯೋಜಿಸಿದ್ದರು. ಪ್ರತಿಭಟನೆಯಲ್ಲಿ ಜಿಗ್ನೇಶ್ ಮೇವಾನಿ ಪಾಲ್ಗೊಂಡಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>