‘ಎರಡು ಕೊಲೆ ಯತ್ನ ಪ್ರಕರಣಗಳಲ್ಲಿ ಆರೋಪಿ ಆಗಿದ್ದ ವಿವೇಕ್, ಜೆ.ಪಿ.ನಗರ ಠಾಣೆಯ ರೌಡಿಶೀಟರ್. ಆತನ ತಂಗಿ ಪರಿಚಯಸ್ಥ ಯುವಕನನ್ನು ಪ್ರೀತಿಸುತ್ತಿದ್ದಳು. ಅವರಿಬ್ಬರು ಮದುವೆಯಾಗಿ ಮನೆ ಬಿಟ್ಟು ಹೋಗಲು ಸುನೀಲ್ ಕುಮಾರ್ ಸಹಾಯ ಮಾಡಿದ್ದ. ಅದೇ ದ್ವೇಷದಲ್ಲಿ ವಿವೇಕ್, ತನ್ನ ಸಹಚರರ ಜೊತೆ ಸೇರಿ ಕೃತ್ಯ ಎಸಗಿದ್ದಾನೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.