‘ಈ ವಿಚಾರದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಚರ್ಚೆ ನಡೆಸಿದ ಬಳಿಕ ವೇಣುಗೋಪಾಲ್ ಮಾಹಿತಿ ನೀಡಲಿದ್ದಾರೆ. ಆದರೆ, ರಾಹುಲ್ ಗಾಂಧಿ ಪಂಚ ರಾಜ್ಯಗಳ ಚುನಾವಣಾ ಪ್ರಚಾರದಲ್ಲಿದ್ದಾರೆ. ಹೀಗಾಗಿ ಅವರಿಬ್ಬರ ಭೇಟಿ ಸಾಧ್ಯವಾಗಿಲ್ಲ. ರಾಹುಲ್ ಹಸಿರುನಿಶಾನೆ ನೀಡಿದ ತಕ್ಷಣ ಸಂಪುಟ ವಿಸ್ತರಣೆ ಮಾಡುತ್ತೇವೆ' ಎಂದರು.