‘ಎಲ್ ಆ್ಯಂಡ್ ಟಿ ಕಂಪನಿ ಈ ಕಾಮಗಾರಿಯ ಗುತ್ತಿಗೆ ಪಡೆದಿದೆ. ಕಾಮಗಾರಿ ವಿಳಂಬವಾಗುತ್ತಿದ್ದರೂ ಅಧಿಕಾರಿಗಳು ಗಮನಹರಿಸಿಲ್ಲ. ಮನೆಗಳ ಮುಂದೆ ಕೇಬಲ್ ಇರಿಸಿ ನಿರ್ಬಂಧ ವಿಧಿಸುವ ಯತ್ನ ಮಾಡಲಾಗಿದೆ. ವಾಹನಗಳನ್ನು ಮನೆಯಿಂದ ಹೊರಗೆ ತೆಗೆಯಲು ಸಾಧ್ಯವಾಗುತ್ತಿಲ್ಲ. ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದರೂ ತ್ವರಿತಗತಿಯಲ್ಲಿ ಕಾಮಗಾರಿ ಮುಗಿಸುತ್ತಿಲ್ಲ’ ಎಂದು ಹೆಣ್ಣೂರು ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಎನ್. ಮುನಿರಾಜು ದೂರಿದ್ದಾರೆ.