<p><strong>ಬೆಂಗಳೂರು</strong>: ನಗರದ ಪಾದಚಾರಿ ಮಾರ್ಗ ಮತ್ತು ಬೀದಿಗಳಲ್ಲಿ ತೂಗಾಡುತ್ತಿರುವ ಎಲ್ಲ ಅನಧಿಕೃತ ಕೇಬಲ್ಗಳನ್ನು ತೆರವುಗೊಳಿಸಲು ಕೇಬಲ್ ಟಿ.ವಿ ಆಪರೇಟರ್ ಮತ್ತು ಇಂಟರ್ನೆಟ್ ಪೂರೈಕೆದಾರ ಕಂಪನಿಗಳಿಗೆ ಒಂದು ತಿಂಗಳ ಗಡುವಿನ ನೋಟಿಸ್ ನೀಡುವಂತೆ ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ವಕೀಲ ಎನ್.ಪಿ.ಅಮೃತೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಅನಧಿಕೃತ ಕೇಬಲ್ ತೆರವು ಕಾರ್ಯಾಚರಣೆ ಮುಂದುವರಿಸುವಂತೆ ತಿಳಿಸಿತು.</p>.<p>ಟಿ.ವಿ ಕೇಬಲ್ ಆಪರೇಟರ್ಗಳ ಸಂಘ, ವಿವಿಧ ಟೆಲಿಕಾಂ, ಇಂಟರ್ನೆಟ್ ಸೇವೆ ಪೂರೈಕೆದಾರ ಕಂಪನಿಗಳನ್ನು ಪ್ರತಿವಾದಿಯಾಗಿ ಸೇರಿಸಿಕೊಳ್ಳಲು ಅನುಮತಿ ಕೋರಿ ಮಧ್ಯಂತರ ಅರ್ಜಿಯನ್ನು(ಐ.ಎ) ಅಮೃತೇಶ್ ಸಲ್ಲಿಸಿದ್ದರು. ತಿದ್ದುಪಡಿ ಮಾಡಿದ ಅರ್ಜಿಯನ್ನು ಎರಡು ವಾರಗಳಲ್ಲಿ ಸಲ್ಲಿಸಲು ಪೀಠ ಅನುಮತಿ ನೀಡಿತು. ಪ್ರತಿವಾದಿಗಳಿಗೆ ನೋಟಿಸ್ ನೀಡಲು ಆದೇಶಿಸಿತು.</p>.<p>‘ಅನಧಿಕೃತವಾಗಿ ಕೇಬಲ್ಗಳನ್ನು ತೂಗುಬಿಟ್ಟಿರುವವರು ತೆರವುಗೊಳಿಸಲು ಒಂದು ತಿಂಗಳ ಕಾಲಾವಕಾಶ ನೀಡಬಹುದು. ನೋಟಿಸ್ ನೀಡಿದ ಒಂದು ತಿಂಗಳ ಬಳಿಕ ಎಲ್ಲವನ್ನೂ ತೆಗೆದು ಹಾಕಲು ಕಾರ್ಯಚರಣೆ ತೀವ್ರಗೊಳಿಸಬೇಕು’ ಎಂದು ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಪಾದಚಾರಿ ಮಾರ್ಗ ಮತ್ತು ಬೀದಿಗಳಲ್ಲಿ ತೂಗಾಡುತ್ತಿರುವ ಎಲ್ಲ ಅನಧಿಕೃತ ಕೇಬಲ್ಗಳನ್ನು ತೆರವುಗೊಳಿಸಲು ಕೇಬಲ್ ಟಿ.ವಿ ಆಪರೇಟರ್ ಮತ್ತು ಇಂಟರ್ನೆಟ್ ಪೂರೈಕೆದಾರ ಕಂಪನಿಗಳಿಗೆ ಒಂದು ತಿಂಗಳ ಗಡುವಿನ ನೋಟಿಸ್ ನೀಡುವಂತೆ ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ವಕೀಲ ಎನ್.ಪಿ.ಅಮೃತೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಅನಧಿಕೃತ ಕೇಬಲ್ ತೆರವು ಕಾರ್ಯಾಚರಣೆ ಮುಂದುವರಿಸುವಂತೆ ತಿಳಿಸಿತು.</p>.<p>ಟಿ.ವಿ ಕೇಬಲ್ ಆಪರೇಟರ್ಗಳ ಸಂಘ, ವಿವಿಧ ಟೆಲಿಕಾಂ, ಇಂಟರ್ನೆಟ್ ಸೇವೆ ಪೂರೈಕೆದಾರ ಕಂಪನಿಗಳನ್ನು ಪ್ರತಿವಾದಿಯಾಗಿ ಸೇರಿಸಿಕೊಳ್ಳಲು ಅನುಮತಿ ಕೋರಿ ಮಧ್ಯಂತರ ಅರ್ಜಿಯನ್ನು(ಐ.ಎ) ಅಮೃತೇಶ್ ಸಲ್ಲಿಸಿದ್ದರು. ತಿದ್ದುಪಡಿ ಮಾಡಿದ ಅರ್ಜಿಯನ್ನು ಎರಡು ವಾರಗಳಲ್ಲಿ ಸಲ್ಲಿಸಲು ಪೀಠ ಅನುಮತಿ ನೀಡಿತು. ಪ್ರತಿವಾದಿಗಳಿಗೆ ನೋಟಿಸ್ ನೀಡಲು ಆದೇಶಿಸಿತು.</p>.<p>‘ಅನಧಿಕೃತವಾಗಿ ಕೇಬಲ್ಗಳನ್ನು ತೂಗುಬಿಟ್ಟಿರುವವರು ತೆರವುಗೊಳಿಸಲು ಒಂದು ತಿಂಗಳ ಕಾಲಾವಕಾಶ ನೀಡಬಹುದು. ನೋಟಿಸ್ ನೀಡಿದ ಒಂದು ತಿಂಗಳ ಬಳಿಕ ಎಲ್ಲವನ್ನೂ ತೆಗೆದು ಹಾಕಲು ಕಾರ್ಯಚರಣೆ ತೀವ್ರಗೊಳಿಸಬೇಕು’ ಎಂದು ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>