<p><strong>ಬೆಂಗಳೂರು</strong>: ವಾಗ್ದೇವಿ ಟ್ರಸ್ಟ್ ನೀಡುವ ಡಾ. ಶಾಂತಾ ರಾಧಾಕೃಷ್ಣ ದತ್ತಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. </p><p>ಪ್ರಶಸ್ತಿಯು ₹10 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. </p><p>ವೃತ್ತಿಪರ ಶಿಕ್ಷಣ, ಸ್ನಾತಕೋತ್ತರ ಶಿಕ್ಷಣ ಪಡೆಯುತ್ತಿರುವ ಶ್ರವಣದೋಷವುಳ್ಳ ವಿದ್ಯಾರ್ಥಿಗಳು, ಶ್ರವಣ ನ್ಯೂನತೆ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ವಾಕ್ ಶ್ರವಣ ತಜ್ಞರು, ವಿಶೇಷ ಶಿಕ್ಷಕರು ಡಿ. 20ರೊಳಗೆ vagdevitrust@gmail.com ಇ–ಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು<br>ಪ್ರಕಟಣೆ ತಿಳಿಸಿದೆ.</p>.<p><strong>ಕಾವ್ಯ ಪ್ರಶಸ್ತಿಗೆ ಕೃತಿಗಳ ಆಹ್ವಾನ</strong></p><p>ಬೆಂಗಳೂರು: ಕರ್ನಾಟಕ ಅಂಧರ ಸಾಹಿತ್ಯ ಪರಿಷತ್ತಿನ ವತಿಯಿಂದ ಪ್ರತಿಭಾ ನಂದಕುಮಾರ್ ಕಾವ್ಯ ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸಲಾಗಿದೆ. </p><p>‘ಕವನ ಸಂಕಲನವು ಅಂಧ ಬರಹಗಾರರ ಸ್ವರಚಿತ ಅಥವಾ ಸಂಪಾದಿತ ಕೃತಿಯಾಗಿರಬೇಕು. ಇತರೆ ಭಾಷೆಗಳಿಂದ ಅನುವಾದಿಸಿರುವ ಕೃತಿಗಳನ್ನು ಪರಿಗಣಿಸಲಾಗುತ್ತದೆ. 2025ರಲ್ಲಿ ಕವನ ಸಂಕಲನಗಳು ಲಭ್ಯವಾಗದ ಸಂದರ್ಭದಲ್ಲಿ 2024ರ ಪ್ರಕಟಗೊಂಡ ಕೃತಿಗಳನ್ನು ಪರಿಗಣಿಸಲಾಗುತ್ತದೆ. ಈ ಪ್ರಶಸ್ತಿಯನ್ನು ಅಖಿಲ ಕರ್ನಾಟಕ ಅಂಧರ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು ₹10 ಸಾವಿರ ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ. ಆಸಕ್ತರು ಇದೇ 20ರೊಳಗೆ ಕೃತಿಗಳನ್ನು ಕಳುಹಿಸಬೇಕು’ ಎಂದು ಪರಿಷತ್ತಿನ ಅಧ್ಯಕ್ಷ ಮುದಿಗೆರೆ ರಮೇಶ್ ಕುಮಾರ್ ತಿಳಿಸಿದ್ದಾರೆ. </p><p>ವಿಳಾಸ: ಮಮತಾ ಜಿ. ಸಾಗರ್, ಡೋರ್ ನಂಬರ್–619, 7ನೇ ಕ್ರಾಸ್, ಒಂದನೇ ಮೇನ್, ನಾಲ್ಕನೇ ಹಂತ ಬಿಇಎಂಎಲ್, ಆರ್.ಆರ್. ನಗರ ಬೆಂಗಳೂರು–98.<br>ಮಾಹಿತಿಗೆ: 98447 69007–</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಾಗ್ದೇವಿ ಟ್ರಸ್ಟ್ ನೀಡುವ ಡಾ. ಶಾಂತಾ ರಾಧಾಕೃಷ್ಣ ದತ್ತಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. </p><p>ಪ್ರಶಸ್ತಿಯು ₹10 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. </p><p>ವೃತ್ತಿಪರ ಶಿಕ್ಷಣ, ಸ್ನಾತಕೋತ್ತರ ಶಿಕ್ಷಣ ಪಡೆಯುತ್ತಿರುವ ಶ್ರವಣದೋಷವುಳ್ಳ ವಿದ್ಯಾರ್ಥಿಗಳು, ಶ್ರವಣ ನ್ಯೂನತೆ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ವಾಕ್ ಶ್ರವಣ ತಜ್ಞರು, ವಿಶೇಷ ಶಿಕ್ಷಕರು ಡಿ. 20ರೊಳಗೆ vagdevitrust@gmail.com ಇ–ಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು<br>ಪ್ರಕಟಣೆ ತಿಳಿಸಿದೆ.</p>.<p><strong>ಕಾವ್ಯ ಪ್ರಶಸ್ತಿಗೆ ಕೃತಿಗಳ ಆಹ್ವಾನ</strong></p><p>ಬೆಂಗಳೂರು: ಕರ್ನಾಟಕ ಅಂಧರ ಸಾಹಿತ್ಯ ಪರಿಷತ್ತಿನ ವತಿಯಿಂದ ಪ್ರತಿಭಾ ನಂದಕುಮಾರ್ ಕಾವ್ಯ ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸಲಾಗಿದೆ. </p><p>‘ಕವನ ಸಂಕಲನವು ಅಂಧ ಬರಹಗಾರರ ಸ್ವರಚಿತ ಅಥವಾ ಸಂಪಾದಿತ ಕೃತಿಯಾಗಿರಬೇಕು. ಇತರೆ ಭಾಷೆಗಳಿಂದ ಅನುವಾದಿಸಿರುವ ಕೃತಿಗಳನ್ನು ಪರಿಗಣಿಸಲಾಗುತ್ತದೆ. 2025ರಲ್ಲಿ ಕವನ ಸಂಕಲನಗಳು ಲಭ್ಯವಾಗದ ಸಂದರ್ಭದಲ್ಲಿ 2024ರ ಪ್ರಕಟಗೊಂಡ ಕೃತಿಗಳನ್ನು ಪರಿಗಣಿಸಲಾಗುತ್ತದೆ. ಈ ಪ್ರಶಸ್ತಿಯನ್ನು ಅಖಿಲ ಕರ್ನಾಟಕ ಅಂಧರ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು ₹10 ಸಾವಿರ ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ. ಆಸಕ್ತರು ಇದೇ 20ರೊಳಗೆ ಕೃತಿಗಳನ್ನು ಕಳುಹಿಸಬೇಕು’ ಎಂದು ಪರಿಷತ್ತಿನ ಅಧ್ಯಕ್ಷ ಮುದಿಗೆರೆ ರಮೇಶ್ ಕುಮಾರ್ ತಿಳಿಸಿದ್ದಾರೆ. </p><p>ವಿಳಾಸ: ಮಮತಾ ಜಿ. ಸಾಗರ್, ಡೋರ್ ನಂಬರ್–619, 7ನೇ ಕ್ರಾಸ್, ಒಂದನೇ ಮೇನ್, ನಾಲ್ಕನೇ ಹಂತ ಬಿಇಎಂಎಲ್, ಆರ್.ಆರ್. ನಗರ ಬೆಂಗಳೂರು–98.<br>ಮಾಹಿತಿಗೆ: 98447 69007–</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>