ಕ್ವಿಟ್ ಇಂಡಿಯಾ ಚಳವಳಿಯ ನೆನಪಿನಲ್ಲಿ ಶನಿವಾರ ವಿವಿಧೆಡೆ ನಡೆದ ಪ್ರತಿಭಟನೆಗಳಲ್ಲಿ ರೈತರು ತಮ್ಮ ಹೊಲಗಳಲ್ಲಿ ಫಲಕಗಳನ್ನು ನೆಡುವ ಮೂಲಕ ಭೂಮಿ ಮಾರಾಟಕ್ಕಿಲ್ಲ ಎಂದು ಘೋಷಿಸಿದರು. ಗ್ರಾಮಗಳಲ್ಲಿ ಮೆರವಣಿಗೆ ನಡೆಸಿ, ಸಾಮೂಹಿಕವಾಗಿ ಪತ್ರಗಳನ್ನು ಅಂಚೆ ಪೆಟ್ಟಿಗೆಗೆ ಹಾಕಿ, ಪೋಸ್ಟರ್ ಹಚ್ಚಿ, ಮನೆ ಬಾಗಿಲಿಗೆ ಸ್ಟಿಕರ್ ಅಂಟಿಸಿ ಚಳವಳಿಗೆ ಬೆಂಬಲ ನೀಡಿದರು. ಉದ್ಯೋಗ ಖಾತ್ರಿ ಯೋಜನೆ ಕೆಲಸಗಾರರು ಕೆಲಸದ ಸ್ಥಳದಲ್ಲೇ ಪ್ರತಿಭಟನೆ ನಡೆಸಿ, ತಮ್ಮನ್ನು ಶಾಶ್ವತ ಕೂಲಿಕಾರರಾಗಿ ಮಾಡದಂತೆ ಒತ್ತಾಯಿಸಿದರು.