ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಬೆಂಗಳೂರು: ಅಪಾಯದ ಸ್ಥಿತಿಯಲ್ಲಿರುವ ಮರಗಳ ತೆರವಿಗೆ ಅಭಿಯಾನ

ಅರಣ್ಯ ವಿಭಾಗದಿಂದ ಕಾರ್ಯಾಚರಣೆ, ಬಿಬಿಎಂಪಿಯೊಂದಿಗೆ ಬೆಸ್ಕಾಂ ಸಹಯೋಗ
Published : 20 ಸೆಪ್ಟೆಂಬರ್ 2024, 15:36 IST
Last Updated : 20 ಸೆಪ್ಟೆಂಬರ್ 2024, 15:36 IST
ಫಾಲೋ ಮಾಡಿ
Comments
ನಾಗರಿಕರು ದೂರು ನೀಡಬಹುದು
ನಾಗರಿಕರು ತಮ್ಮ ಸುತ್ತಮುತ್ತ ಪ್ರದೇಶಗಳಲ್ಲಿ ಒಣಗಿರುವ ಅಪಾಯ ಸ್ಥಿತಿಯಲ್ಲಿರುವ ಮರ ಹಾಗೂ ಮರದ ರೆಂಬೆ ಕೊಂಬೆಗಳು ಕಂಡುಬಂದಲ್ಲಿ ಗಾಳಿ/ಮಳೆಗೆ ಬಿದ್ದಿರುವ ಮರಗಳನ್ನು ತೆರವುಗೊಳಿಸಲು ಬಿಬಿಎಂಪಿ  ಸಹಾಯವಾಣಿ 1533 ಅಥವಾ 080-22221188 / 08022660000ಗೆ ಕರೆ ಮಾಡಿ ದೂರು ನೀಡಬಹುದು.
ಪಾದಚಾರಿ ಮಾರ್ಗ ಒತ್ತುವರಿ ತೆರವಿಗೆ ಸೂಚನೆ
ಜಯನಗರದಲ್ಲಿ ಪಾದಚಾರಿ ಮಾರ್ಗದಲ್ಲಿ ಅನಧಿಕೃತ ಕೇಬಲ್‌ಗಳನ್ನು ತೆರವುಗೊಳಿಸಲು ಮುಖ್ಯ ಆಯುಕ್ತರು ಸೂಚಿಸಿದರು. ಭಾರತ್ ಟಿವಿಎಸ್ ಸಂಸ್ಥೆ ಸಂಪೂರ್ಣ ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿಕೊಂಡಿದ್ದನ್ನು ಗಮನಿಸಿ ಅವರಿಗೆ ದಂಡ ವಿಧಿಸಿ ಉದ್ದಿಮೆ ಪರವಾನಗಿ ಅಮಾನತು ಮಾಡಲು ಹೇಳಿದರು. ಯಡಿಯೂರು ವಾರ್ಡ್ 16ನೇ ಅಡ್ಡರಸ್ತೆಯಲ್ಲಿ ಬೆಸ್ಕಾಂ ಅಳವಡಿಸಿರುವ ಟ್ರಾನ್ಸ್‌ಫಾರ್ಮರ್‌ಗೆ ಸಂಪರ್ಕ ಹೊಂದಿರುವ ಕೇಬಲ್‌ಗಳು ಚರಂಡಿಗೆ ಅಡ್ಡವಾಗಿದ್ದನ್ನು ಗಮನಿಸಿ ಅದನ್ನು ತೆರವುಗೊಳಿಸಲು ಸೂಚಿಸಿದರು. ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ಬಳಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಬೇಕು. ಮತ್ತೆ-ಮತ್ತೆ ಒತ್ತುವರಿಯಾಗದಂತೆ  ನಿತ್ಯ ಪರಿಶೀಲನೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಹೇಳಿದರು. ರಸ್ತೆ ಹಾಗೂ ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುವುದು ಕಾನೂನುಬಾಹಿರವಾಗಿದ್ದು ಅದನ್ನು ತೆರವುಗೊಳಿಸಲಾಗುತ್ತದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT