ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಅತಾವುಲ್ಲಾ ಪುಂಜಾಲಕಟ್ಟೆ ಮಾತನಾಡಿ, ‘ಪ್ರತಿಭಟಿಸುವ ಹಕ್ಕನ್ನು ಧಮನಿಸುವ ರಾಜ್ಯ ಸರ್ಕಾರದ ನಡೆ ಖಂಡನೀಯ. ವಿದ್ಯಾರ್ಥಿಗಳ ಮೇಲೆ ಏಕಾಏಕಿ ಪೊಲೀಸರು ಲಾಠಿ ಬೀಸಿ, ದೌರ್ಜನ್ಯ ನಡೆಸಿದ್ದಾರೆ. ಪ್ರತಿಭಟನನಿರತ ಹಲವಾರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದ್ದು, ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಇದಾಗಿದೆ’ ಎಂದು ಹೇಳಿದರು.