<p><strong>ಯಲಹಂಕ:</strong>ಯಲಹಂಕದಲ್ಲಿರುವ ಕೆನಡಿಯನ್ ವಸತಿ ಶಾಲೆಯನ್ನು ಕೋವಿಡ್ ಆರೈಕೆ ಕೇಂದ್ರವಾಗಿ ಪರಿವರ್ತಿಸಲಾಗಿದೆ.</p>.<p>120 ಹಾಸಿಗೆಗಳ ಈ ಕೇಂದ್ರವನ್ನು ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ ಅವರ ಮೂಲಕ ಶಾಲೆಯ ಮುಖ್ಯಸ್ಥರಾದ ರಮಣಿ ಶಾಸ್ತ್ರಿಯವರು ಜಿಲ್ಲಾಧಿಕಾರಿ ಜೆ. ಮಂಜುನಾಥ್ ಅವರಿಗೆ ಶನಿವಾರ ಹಸ್ತಾಂತರಿಸಿದರು.</p>.<p>‘ಇಡೀ ಪ್ರಪಂಚವೇ ಸಂಕಷ್ಟದಲ್ಲಿ ಸಿಲುಕಿರುವ ಈ ಸಂದರ್ಭದಲ್ಲಿ ಕೆನಡಿಯನ್ ಶಾಲೆಯ ರೀತಿಯಲ್ಲಿ ಖಾಸಗಿ ಸಂಘ ಸಂಸ್ಥೆಗಳು ಸರ್ಕಾರದೊಂದಿಗೆ ಕೈಜೋಡಿಸಿ ಕೋವಿಡ್ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಬೇಕು’ ಎಂದು ವಿಶ್ವನಾಥ್ ಕೋರಿದರು.</p>.<p>‘ಈ ಶಾಲೆ 60 ಕೊಠಡಿಗಳನ್ನು ಹೊಂದಿದ್ದು, ಪ್ರತಿ ಕೊಠಡಿಯಲ್ಲಿ ಎರಡು ಹಾಸಿಗೆಗಳು ಇವೆ. ಪ್ರತಿಯೊಂದಕ್ಕೂ ಆಮ್ಲಜನಕ ಪೂರೈಸುವ ಸಾಧನಗಳನ್ನು ಅಳವಡಿಸಲಾಗಿದೆ’ ಎಂದರು.</p>.<p>ರಮಣಿ ಶಾಸ್ತ್ರಿ, ‘ಸಾಮಾಜಿಕ ಕಳಕಳಿಯ ಉದ್ದೇಶದಿಂದ ನಾವು ನಮ್ಮ ಶಾಲೆಯನ್ನು ಕೇವಲ 15 ದಿನಗಳಲ್ಲಿ ತಾತ್ಕಾಲಿಕ ಆಸ್ಪತ್ರೆಯನ್ನಾಗಿ ಪರಿವರ್ತಿಸಿದ್ದೇವೆ. ಇಲ್ಲಿ ಸೈಟ್ ಕೇರ್ ಆಸ್ಪತ್ರೆಯ ವೈದ್ಯರು, ಶುಶ್ರೂಷಕರು ದಿನದ 24 ಗಂಟೆಯೂ ಸೋಂಕಿತರಿಗೆ ಚಿಕಿತ್ಸೆ ನೀಡಿ ಆರೈಕೆ ಮಾಡಲಿದ್ದಾರೆ’ ಎಂದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong>ಯಲಹಂಕದಲ್ಲಿರುವ ಕೆನಡಿಯನ್ ವಸತಿ ಶಾಲೆಯನ್ನು ಕೋವಿಡ್ ಆರೈಕೆ ಕೇಂದ್ರವಾಗಿ ಪರಿವರ್ತಿಸಲಾಗಿದೆ.</p>.<p>120 ಹಾಸಿಗೆಗಳ ಈ ಕೇಂದ್ರವನ್ನು ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ ಅವರ ಮೂಲಕ ಶಾಲೆಯ ಮುಖ್ಯಸ್ಥರಾದ ರಮಣಿ ಶಾಸ್ತ್ರಿಯವರು ಜಿಲ್ಲಾಧಿಕಾರಿ ಜೆ. ಮಂಜುನಾಥ್ ಅವರಿಗೆ ಶನಿವಾರ ಹಸ್ತಾಂತರಿಸಿದರು.</p>.<p>‘ಇಡೀ ಪ್ರಪಂಚವೇ ಸಂಕಷ್ಟದಲ್ಲಿ ಸಿಲುಕಿರುವ ಈ ಸಂದರ್ಭದಲ್ಲಿ ಕೆನಡಿಯನ್ ಶಾಲೆಯ ರೀತಿಯಲ್ಲಿ ಖಾಸಗಿ ಸಂಘ ಸಂಸ್ಥೆಗಳು ಸರ್ಕಾರದೊಂದಿಗೆ ಕೈಜೋಡಿಸಿ ಕೋವಿಡ್ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಬೇಕು’ ಎಂದು ವಿಶ್ವನಾಥ್ ಕೋರಿದರು.</p>.<p>‘ಈ ಶಾಲೆ 60 ಕೊಠಡಿಗಳನ್ನು ಹೊಂದಿದ್ದು, ಪ್ರತಿ ಕೊಠಡಿಯಲ್ಲಿ ಎರಡು ಹಾಸಿಗೆಗಳು ಇವೆ. ಪ್ರತಿಯೊಂದಕ್ಕೂ ಆಮ್ಲಜನಕ ಪೂರೈಸುವ ಸಾಧನಗಳನ್ನು ಅಳವಡಿಸಲಾಗಿದೆ’ ಎಂದರು.</p>.<p>ರಮಣಿ ಶಾಸ್ತ್ರಿ, ‘ಸಾಮಾಜಿಕ ಕಳಕಳಿಯ ಉದ್ದೇಶದಿಂದ ನಾವು ನಮ್ಮ ಶಾಲೆಯನ್ನು ಕೇವಲ 15 ದಿನಗಳಲ್ಲಿ ತಾತ್ಕಾಲಿಕ ಆಸ್ಪತ್ರೆಯನ್ನಾಗಿ ಪರಿವರ್ತಿಸಿದ್ದೇವೆ. ಇಲ್ಲಿ ಸೈಟ್ ಕೇರ್ ಆಸ್ಪತ್ರೆಯ ವೈದ್ಯರು, ಶುಶ್ರೂಷಕರು ದಿನದ 24 ಗಂಟೆಯೂ ಸೋಂಕಿತರಿಗೆ ಚಿಕಿತ್ಸೆ ನೀಡಿ ಆರೈಕೆ ಮಾಡಲಿದ್ದಾರೆ’ ಎಂದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>