<p><strong>ಬೆಂಗಳೂರು:</strong> ಸರ್ಕಾರಿ ಸ್ವಾಮ್ಯದ ಪ್ರಮುಖ ಬ್ಯಾಂಕ್ಗಳಲ್ಲಿ ಒಂದಾಗಿರುವ ಕೆನರಾ ಬ್ಯಾಂಕ್ನ ‘ಸಂಸ್ಥಾಪಕರ ದಿನಾಚರಣೆ’ ನಗರದ ಜೆ.ಸಿ. ರಸ್ತೆಯಲ್ಲಿರುವ ಪ್ರಧಾನ ಕಚೇರಿಯಲ್ಲಿ ಗುರುವಾರ ನಡೆಯಿತು.</p>.<p>ಬ್ಯಾಂಕಿನ ಸಂಸ್ಥಾಪಕರಾದ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಮರಿ ಮೊಮ್ಮಗನ ಮಗ ಅಮ್ಮೆಂಬಳ ಸಿದ್ಧಾರ್ಥ ಪೈ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ಮತ್ತು ವ್ಯವಸ್ಥಾಪಕ ನಿರ್ದೇಶಕ ಎಲ್.ವಿ. ಪ್ರಭಾಕರ್ ಹಾಗೂ ಬ್ಯಾಂಕಿನ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<p>ಬ್ಯಾಂಕಿನ ಗ್ರಾಹಕರು, ಹಿತೈಷಿಗಳು ಮತ್ತು ಸಿಬ್ಬಂದಿ ದೇಶದ ಎಲ್ಲೆಡೆಗಳಿಂದ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎಂದು ಬ್ಯಾಂಕ್ನ ಪ್ರಕಟಣೆ ತಿಳಿಸಿದೆ.</p>.<p>‘ಬಡವರಿಗೆ ಅತ್ಯುತ್ತಮ ಸೇವೆಗಳನ್ನು ಯೋಗ್ಯ ಬೆಲೆಗೆ ಒದಗಿಸಲು ವ್ಯವಸ್ಥಿತವಾದ ಬ್ಯಾಂಕ್ ಬೇಕು ಎಂದು ಸುಬ್ಬರಾವ್ ಪೈ ಅವರು ಬಯಸಿದ್ದರು. ಅವರ ಕನಸುಗಳು ಸಾಕಾರಗೊಳ್ಳುತ್ತಿವೆ’ ಎಂದು ಪ್ರಭಾಕರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸರ್ಕಾರಿ ಸ್ವಾಮ್ಯದ ಪ್ರಮುಖ ಬ್ಯಾಂಕ್ಗಳಲ್ಲಿ ಒಂದಾಗಿರುವ ಕೆನರಾ ಬ್ಯಾಂಕ್ನ ‘ಸಂಸ್ಥಾಪಕರ ದಿನಾಚರಣೆ’ ನಗರದ ಜೆ.ಸಿ. ರಸ್ತೆಯಲ್ಲಿರುವ ಪ್ರಧಾನ ಕಚೇರಿಯಲ್ಲಿ ಗುರುವಾರ ನಡೆಯಿತು.</p>.<p>ಬ್ಯಾಂಕಿನ ಸಂಸ್ಥಾಪಕರಾದ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಮರಿ ಮೊಮ್ಮಗನ ಮಗ ಅಮ್ಮೆಂಬಳ ಸಿದ್ಧಾರ್ಥ ಪೈ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ಮತ್ತು ವ್ಯವಸ್ಥಾಪಕ ನಿರ್ದೇಶಕ ಎಲ್.ವಿ. ಪ್ರಭಾಕರ್ ಹಾಗೂ ಬ್ಯಾಂಕಿನ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<p>ಬ್ಯಾಂಕಿನ ಗ್ರಾಹಕರು, ಹಿತೈಷಿಗಳು ಮತ್ತು ಸಿಬ್ಬಂದಿ ದೇಶದ ಎಲ್ಲೆಡೆಗಳಿಂದ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎಂದು ಬ್ಯಾಂಕ್ನ ಪ್ರಕಟಣೆ ತಿಳಿಸಿದೆ.</p>.<p>‘ಬಡವರಿಗೆ ಅತ್ಯುತ್ತಮ ಸೇವೆಗಳನ್ನು ಯೋಗ್ಯ ಬೆಲೆಗೆ ಒದಗಿಸಲು ವ್ಯವಸ್ಥಿತವಾದ ಬ್ಯಾಂಕ್ ಬೇಕು ಎಂದು ಸುಬ್ಬರಾವ್ ಪೈ ಅವರು ಬಯಸಿದ್ದರು. ಅವರ ಕನಸುಗಳು ಸಾಕಾರಗೊಳ್ಳುತ್ತಿವೆ’ ಎಂದು ಪ್ರಭಾಕರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>