<p><strong>ಬೆಂಗಳೂರು</strong>: ಕೆನರಾ ಬ್ಯಾಂಕ್ ತನ್ನ ಪ್ರಧಾನ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಸಾಧಕರಿಗೆ ಸನ್ಮಾನ ಮಾಡಲಾಯಿತು. </p>.<p>ಸಮಾರಂಭ ಉದ್ಘಾಟಿಸಿದ ಸಂಗೀತ ನಿರ್ದೇಶಕ ಹಂಸಲೇಖ, ‘ಕೆನರಾ ಬ್ಯಾಂಕ್ ಕರ್ನಾಟಕದ ಹೃದಯಕ್ಕೆ ಹತ್ತಿರವಾದ ಬ್ಯಾಂಕ್ ಆಗಿದ್ದು, ಲಕ್ಷಾಂತರ ಜನರ ಬದುಕಿನ ಜೀವನಾಡಿಯಾಗಿದೆ. ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮದ ಮೂಲಕ ಈ ಬ್ಯಾಂಕ್ ಸಂಗೀತ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಸತ್ಯನಾರಾಯಣ ರಾಜು, ‘ಕನ್ನಡ ಭಾಷೆ ನಮ್ಮೆಲ್ಲರ ಹೆಮ್ಮೆ’ ಎಂದು ಹೇಳಿದರು. </p>.<p>ನಿವೃತ್ತಿಯ ನಂತರವೂ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಗೆ ತಮ್ಮನ್ನು ಅರ್ಪಿಸಿಕೊಂಡಿರುವ ಕೆನರಾ ಬ್ಯಾಂಕ್ನ ನಿವೃತ್ತ ಅಧಿಕಾರಿಗಳಾದ ಗೋಪಾಲಕೃಷ್ಣ ಪೈ, ಎಂ. ವೆಂಕಟೇಶ ಶೇಷಾದ್ರಿ, ಬಿ.ಎನ್. ರಮೇಶ್ ಕುಮಾರ್, ಕೆ.ಎಸ್. ರವೀಂದ್ರನಾಥ್ ಮತ್ತು ಕೆ.ಜಿ. ಸಂಪತ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. </p>.<p>ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾದ ಹರ್ದೀಪ್ ಸಿಂಗ್ ಅಹ್ಲುವಾಲಿಯಾ, ಸುನಿಲ್ ಕುಮಾರ್ ಚುಫ್, ಮುಖ್ಯ ಜಾಗೃತ ಅಧಿಕಾರಿ ನವೀನ್ ಕುಮಾರ್ ದಾಸ್ ಮತ್ತು ಹಿರಿಯ ಅಧಿಕಾರಿಗಳಾದ ರಾಮ ನಾಯ್ಕ್, ಆರ್. ರಾಜೇಶ್ ಮತ್ತು ಮೋಹನ್ ಕುಮಾರ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೆನರಾ ಬ್ಯಾಂಕ್ ತನ್ನ ಪ್ರಧಾನ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಸಾಧಕರಿಗೆ ಸನ್ಮಾನ ಮಾಡಲಾಯಿತು. </p>.<p>ಸಮಾರಂಭ ಉದ್ಘಾಟಿಸಿದ ಸಂಗೀತ ನಿರ್ದೇಶಕ ಹಂಸಲೇಖ, ‘ಕೆನರಾ ಬ್ಯಾಂಕ್ ಕರ್ನಾಟಕದ ಹೃದಯಕ್ಕೆ ಹತ್ತಿರವಾದ ಬ್ಯಾಂಕ್ ಆಗಿದ್ದು, ಲಕ್ಷಾಂತರ ಜನರ ಬದುಕಿನ ಜೀವನಾಡಿಯಾಗಿದೆ. ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮದ ಮೂಲಕ ಈ ಬ್ಯಾಂಕ್ ಸಂಗೀತ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಸತ್ಯನಾರಾಯಣ ರಾಜು, ‘ಕನ್ನಡ ಭಾಷೆ ನಮ್ಮೆಲ್ಲರ ಹೆಮ್ಮೆ’ ಎಂದು ಹೇಳಿದರು. </p>.<p>ನಿವೃತ್ತಿಯ ನಂತರವೂ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಗೆ ತಮ್ಮನ್ನು ಅರ್ಪಿಸಿಕೊಂಡಿರುವ ಕೆನರಾ ಬ್ಯಾಂಕ್ನ ನಿವೃತ್ತ ಅಧಿಕಾರಿಗಳಾದ ಗೋಪಾಲಕೃಷ್ಣ ಪೈ, ಎಂ. ವೆಂಕಟೇಶ ಶೇಷಾದ್ರಿ, ಬಿ.ಎನ್. ರಮೇಶ್ ಕುಮಾರ್, ಕೆ.ಎಸ್. ರವೀಂದ್ರನಾಥ್ ಮತ್ತು ಕೆ.ಜಿ. ಸಂಪತ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. </p>.<p>ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾದ ಹರ್ದೀಪ್ ಸಿಂಗ್ ಅಹ್ಲುವಾಲಿಯಾ, ಸುನಿಲ್ ಕುಮಾರ್ ಚುಫ್, ಮುಖ್ಯ ಜಾಗೃತ ಅಧಿಕಾರಿ ನವೀನ್ ಕುಮಾರ್ ದಾಸ್ ಮತ್ತು ಹಿರಿಯ ಅಧಿಕಾರಿಗಳಾದ ರಾಮ ನಾಯ್ಕ್, ಆರ್. ರಾಜೇಶ್ ಮತ್ತು ಮೋಹನ್ ಕುಮಾರ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>