<p><strong>ಬೆಂಗಳೂರು</strong>: ಕೆನರಾ ಬ್ಯಾಂಕ್ ಸೆ.19ರಿಂದ 21ರವರೆಗೆ ನಗರದ ಎಂ.ಜಿ.ರಸ್ತೆಯ ರಂಗೋಲಿ ಮೆಟ್ರೊ ಆರ್ಟ್ ಸೆಂಟರ್ನಲ್ಲಿ ಕೆನರಾ ಉತ್ಸವವನ್ನು ಹಮ್ಮಿಕೊಂಡಿದೆ.</p>.<p>ಉತ್ಸವದಲ್ಲಿ ಮಹಿಳಾ ಸ್ವಸಹಾಯ ಸಂಘಗಳು, ಗ್ರಾಮೀಣ ಉದ್ಯಮಿಗಳು ಮತ್ತು ಸ್ಥಳೀಯ ಕರಕುಶಲ ಕಲಾವಿದರು ತಯಾರಿಸಿದ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಬೆಳಿಗ್ಗೆ 11ರಿಂದ ರಾತ್ರಿ 8ರವರೆಗೆ ನಡೆಯಲಿದೆ.</p>.<p>70 ಮಹಿಳಾ ಉದ್ಯಮಿಗಳು ಭಾಗವಹಿಸಲಿರುವ ಈ ಉತ್ಸವದಲ್ಲಿ ಸಿದ್ಧಪಡಿಸಿದ ಉಡುಪುಗಳು, ಗೃಹ ಅಲಂಕಾರ, ಟೆರಾಕೋಟ, ಕರಕುಶಲ, ಕೃತಕ ಆಭರಣ, ಪ್ರಸಾದನ ಇತ್ಯಾದಿ ಉತ್ಪನ್ನಗಳು ಒಂದೇ ಸೂರಿನಡಿಯಲ್ಲಿ ಲಭ್ಯವಾಗಲಿವೆ.</p>.<p>‘ಮಹಿಳಾ ಸಬಲೀಕರಣ, ಉದ್ಯಮಶೀಲತೆ ಹಾಗೂ ಸಾಂಸ್ಕೃತಿಕ ಪರಂಪರೆ ಉತ್ತೇಜಿಸಲು ಕೆನರಾ ಬ್ಯಾಂಕ್ ತನ್ನ ಸಾಮಾಜಿಕ ಹೊಣೆಗಾರಿಕೆ ಅಡಿಯಲ್ಲಿ ಉತ್ಸವ ಆಯೋಜಿಸುತ್ತಿದೆ. ಪ್ರದರ್ಶನವು ಮಹಿಳಾ ಉದ್ಯಮಿಗಳ ಜೀವನೋಪಾಯವನ್ನು ಬೆಂಬಲಿಸಿ ತಳಮಟ್ಟದಲ್ಲಿ ಉದ್ಯಮಶೀಲ ವ್ಯವಸ್ಥೆಯನ್ನು ಬಲಪಡಿಸುತ್ತದೆ ́ ಎಂದು ಕೆನರಾ ಬ್ಯಾಂಕ್ ವೃತ್ತ ಕಚೇರಿಯ ಮುಖ್ಯ ಮಹಾಪ್ರಬಂಧಕ ಮಹೇಶ್ ಪೈ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೆನರಾ ಬ್ಯಾಂಕ್ ಸೆ.19ರಿಂದ 21ರವರೆಗೆ ನಗರದ ಎಂ.ಜಿ.ರಸ್ತೆಯ ರಂಗೋಲಿ ಮೆಟ್ರೊ ಆರ್ಟ್ ಸೆಂಟರ್ನಲ್ಲಿ ಕೆನರಾ ಉತ್ಸವವನ್ನು ಹಮ್ಮಿಕೊಂಡಿದೆ.</p>.<p>ಉತ್ಸವದಲ್ಲಿ ಮಹಿಳಾ ಸ್ವಸಹಾಯ ಸಂಘಗಳು, ಗ್ರಾಮೀಣ ಉದ್ಯಮಿಗಳು ಮತ್ತು ಸ್ಥಳೀಯ ಕರಕುಶಲ ಕಲಾವಿದರು ತಯಾರಿಸಿದ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಬೆಳಿಗ್ಗೆ 11ರಿಂದ ರಾತ್ರಿ 8ರವರೆಗೆ ನಡೆಯಲಿದೆ.</p>.<p>70 ಮಹಿಳಾ ಉದ್ಯಮಿಗಳು ಭಾಗವಹಿಸಲಿರುವ ಈ ಉತ್ಸವದಲ್ಲಿ ಸಿದ್ಧಪಡಿಸಿದ ಉಡುಪುಗಳು, ಗೃಹ ಅಲಂಕಾರ, ಟೆರಾಕೋಟ, ಕರಕುಶಲ, ಕೃತಕ ಆಭರಣ, ಪ್ರಸಾದನ ಇತ್ಯಾದಿ ಉತ್ಪನ್ನಗಳು ಒಂದೇ ಸೂರಿನಡಿಯಲ್ಲಿ ಲಭ್ಯವಾಗಲಿವೆ.</p>.<p>‘ಮಹಿಳಾ ಸಬಲೀಕರಣ, ಉದ್ಯಮಶೀಲತೆ ಹಾಗೂ ಸಾಂಸ್ಕೃತಿಕ ಪರಂಪರೆ ಉತ್ತೇಜಿಸಲು ಕೆನರಾ ಬ್ಯಾಂಕ್ ತನ್ನ ಸಾಮಾಜಿಕ ಹೊಣೆಗಾರಿಕೆ ಅಡಿಯಲ್ಲಿ ಉತ್ಸವ ಆಯೋಜಿಸುತ್ತಿದೆ. ಪ್ರದರ್ಶನವು ಮಹಿಳಾ ಉದ್ಯಮಿಗಳ ಜೀವನೋಪಾಯವನ್ನು ಬೆಂಬಲಿಸಿ ತಳಮಟ್ಟದಲ್ಲಿ ಉದ್ಯಮಶೀಲ ವ್ಯವಸ್ಥೆಯನ್ನು ಬಲಪಡಿಸುತ್ತದೆ ́ ಎಂದು ಕೆನರಾ ಬ್ಯಾಂಕ್ ವೃತ್ತ ಕಚೇರಿಯ ಮುಖ್ಯ ಮಹಾಪ್ರಬಂಧಕ ಮಹೇಶ್ ಪೈ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>