ನಿಗದಿತ ಖಾಸಗಿ ಆಸ್ಪತ್ರೆಗಳು ಕೋವಿಡ್ ರೋಗಿಗಳು ಹಾಗೂ ಸೋಂಕು ಶಂಕಿತರನ್ನು ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಬೇಕು. ತಮ್ಮ ಆಸ್ಪತ್ರೆಗಳಲ್ಲಿ ಶೇ 50 ರಷ್ಟು ಹಾಸಿಗೆಗಳನ್ನು ಶಿಫಾರಸ್ಸು ಮಾಡುವ ರೋಗಿಗಳಿಗೆ ಮೀಸಲಿಡಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. ಆದರೆ, ಈ ಆದೇಶವನ್ನು ವಿಕ್ರಮ್ ಹಾಗೂ ಅಪೊಲೋ ಆಸ್ಪತ್ರೆಯ ಜಯನಗರ ಶಾಖೆ ಪಾಲಿಸಿದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಆಸ್ಪತ್ರೆಗಳಿಗೆ ಸೋಮವಾರ ಭೇಟಿ ನೀಡಿ, ಕೆಪಿಎಂಇ ಹಾಗೂ ವಿಪತ್ತು ನಿರ್ವಹಣಾ ಕಾಯ್ದೆಯಡಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿತ್ತು.