ಇಂಡಿಯನ್ ಕ್ಯಾನ್ಸರ್ ಸೊಸೈಟಿಯ ಕಾರ್ಯಕ್ರಮ ಸಂಯೋಜಕಿ ಡಾ.ಜವೇರಾ ಫಾತಿಮಾ, ‘ದೇಶವು ಕ್ಯಾನ್ಸರ್ ಆರೈಕೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸುತ್ತಿದೆ. ಕ್ಯಾನ್ಸರ್ ಕಾಯಿಲೆ ಎದುರಿಸಲು ಮಾನಸಿಕ ಶಕ್ತಿಯೂ ಅಗತ್ಯ. ಬೇಗ ಆಸ್ಪತ್ರೆಗಳಿಗೆ ತೆರಳಿ, ತಪಾಸಣೆ ಮಾಡಿಸಿಕೊಂಡಲ್ಲಿ ಜೀವಕ್ಕೆ ಅಪಾಯವಾಗುವುದನ್ನು ತಪ್ಪಿಸಬಹುದು. ಅತ್ಯಾಧುನಿಕ ತಂತ್ರಜ್ಞಾನದ ನೆರವಿನಿಂದ ಕಾಯಿಲೆಯನ್ನು ವಾಸಿ ಮಾಡಲು ಸಾಧ್ಯ. ಬದಲಾದ ಜೀವನ ಶೈಲಿ, ಪಾಶ್ಚಿಮಾತ್ಯ ಆಹಾರ ಪದ್ಧತಿ, ಧೂಮಪಾನದಂತಹ ವ್ಯಸನಗಳಿಂದ ಕ್ಯಾನ್ಸರ್ ಪ್ರಕರಣಗಳು ಹೆಚ್ಚಳವಾಗುತ್ತಿವೆ’ ಎಂದು ತಿಳಿಸಿದರು.