<p><strong>ಬೆಂಗಳೂರು:‘</strong>ಸಮುದಾಯಕ್ಕೆ ಶಿಕ್ಷಣ ನೀಡುವ ಮೂಲಕ ಸ್ತನ ಕ್ಯಾನ್ಸರ್ ನಿಯಂತ್ರಿಸಲು ಸಾಧ್ಯವಿದೆ’ ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿವೃತ್ತ ನಿರ್ದೇಶಕಿ ಡಾ. ವಿಜಯಲಕ್ಷ್ಮಿ ದೇಶಮಾನೆ ಅಭಿಪ್ರಾಯಪಟ್ಟರು.</p>.<p>ಬೆಂಗಳೂರು ವಿಶ್ವವಿದ್ಯಾಲಯ ಮಹಿಳಾ ಅಧ್ಯಯನ ಕೇಂದ್ರದಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಇತ್ತೀಚೆಗೆ ಮಹಿಳೆಯರಲ್ಲಿ ಹೃದಯ ಸಂಬಂಧಿ ಕಾಯಿಲೆಗಳ ಜೊತೆಗೆ, ಸ್ತನ ಕ್ಯಾನ್ಸರ್ ಕೂಡ ಹೆಚ್ಚಾಗುತ್ತಿದೆ. ಈ ಕ್ಯಾನ್ಸರ್ ವೇಗವಾಗಿ ಹರಡಿ, ಸೂಕ್ತ ಚಿಕಿತ್ಸೆಯಿಲ್ಲದೇ ನರಳುವಂತಾಗಿದೆ. ಆರಂಭದಲ್ಲಿಯೇ ರೋಗ ಪತ್ತೆ ಮಾಡಿ ಸೂಕ್ತ ಚಿಕಿತ್ಸೆ ಪಡೆದರೆ ಶೇ 98ರಷ್ಟು ಗುಣಮುಖರಾಗಬಹುದು’ ಎಂದರು.</p>.<p>‘ಜೀವನಶೈಲಿ, ಸಂತಾನೋತ್ಪತ್ತಿ ಸಂಬಂಧಿತ ಸಮಸ್ಯೆ, ತಡವಾದ ಋತುಬಂಧ, ವಂಶಾವಳಿ ಕಾಯಿಲೆ, ರೇಡಿಯೇಷನ್ಗಳಿಂದ ಮಹಿಳೆಯರು ಸ್ತನ ಕ್ಯಾನ್ಸರ್ಗೆ ಒಳಗಾಗುತ್ತಾರೆ. ಇದನ್ನು ಗುಣಪಡಿಸಲು ಯಾವುದೇ ನಿರ್ದಿಷ್ಟ ವೈದ್ಯಕೀಯ ಪರಿಕರಗಳು, ಪದ್ಧತಿ, ಚಿಕಿತ್ಸಾ ಮಾರ್ಗ ಲಭ್ಯವಿಲ್ಲ’ ಎಂದು ವಿವರಿಸಿದರು.</p>.<p>‘ಮಹಿಳೆಯರು ಪೌಷ್ಟಿಕ ಆಹಾರ ಸೇವಿಸಬೇಕು, ಆರೋಗ್ಯಕರ ಜೀವನ ಶೈಲಿ ಅಳವಡಿಸಿಕೊಳ್ಳಬೇಕು. ನಿಗದಿತ ಆರೋಗ್ಯ ತಪಾಸಣೆ ಮಾಡಿಸಬೇಕು. ಇದರಿಂದ ರೋಗವನ್ನು ನಿಯಂತ್ರಿಸಬಹುದಾಗಿದೆ’ ಎಂದು ಸಲಹೆ ನೀಡಿದರು.</p>.<p>‘ಸ್ತನ ಕ್ಯಾನ್ಸರ್ ಚಿಕಿತ್ಸೆ ಬಲು ದುಬಾರಿ. ಬಡವರು ಎಲ್ಲಿಂದ ಹಣ ತರುತ್ತಾರೆ? ಆ ನಿಟ್ಟಿನಲ್ಲಿ ಸ್ತನ ಕ್ಯಾನ್ಸರ್ ಕುರಿತು ಎಲ್ಲಾ ಸಂಸ್ಥೆಗಳು ಜಾಗೃತಿ ಮೂಡಿಸಬೇಕು’ ಎಂದರು.</p>.<p>ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಮಹಿಳಾ ಉದ್ಯೋಗಿಗಳಿಗಾಗಿ ವಿಶೇಷ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತರಾಗಿ ಬಹುಮಾನ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:‘</strong>ಸಮುದಾಯಕ್ಕೆ ಶಿಕ್ಷಣ ನೀಡುವ ಮೂಲಕ ಸ್ತನ ಕ್ಯಾನ್ಸರ್ ನಿಯಂತ್ರಿಸಲು ಸಾಧ್ಯವಿದೆ’ ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿವೃತ್ತ ನಿರ್ದೇಶಕಿ ಡಾ. ವಿಜಯಲಕ್ಷ್ಮಿ ದೇಶಮಾನೆ ಅಭಿಪ್ರಾಯಪಟ್ಟರು.</p>.<p>ಬೆಂಗಳೂರು ವಿಶ್ವವಿದ್ಯಾಲಯ ಮಹಿಳಾ ಅಧ್ಯಯನ ಕೇಂದ್ರದಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಇತ್ತೀಚೆಗೆ ಮಹಿಳೆಯರಲ್ಲಿ ಹೃದಯ ಸಂಬಂಧಿ ಕಾಯಿಲೆಗಳ ಜೊತೆಗೆ, ಸ್ತನ ಕ್ಯಾನ್ಸರ್ ಕೂಡ ಹೆಚ್ಚಾಗುತ್ತಿದೆ. ಈ ಕ್ಯಾನ್ಸರ್ ವೇಗವಾಗಿ ಹರಡಿ, ಸೂಕ್ತ ಚಿಕಿತ್ಸೆಯಿಲ್ಲದೇ ನರಳುವಂತಾಗಿದೆ. ಆರಂಭದಲ್ಲಿಯೇ ರೋಗ ಪತ್ತೆ ಮಾಡಿ ಸೂಕ್ತ ಚಿಕಿತ್ಸೆ ಪಡೆದರೆ ಶೇ 98ರಷ್ಟು ಗುಣಮುಖರಾಗಬಹುದು’ ಎಂದರು.</p>.<p>‘ಜೀವನಶೈಲಿ, ಸಂತಾನೋತ್ಪತ್ತಿ ಸಂಬಂಧಿತ ಸಮಸ್ಯೆ, ತಡವಾದ ಋತುಬಂಧ, ವಂಶಾವಳಿ ಕಾಯಿಲೆ, ರೇಡಿಯೇಷನ್ಗಳಿಂದ ಮಹಿಳೆಯರು ಸ್ತನ ಕ್ಯಾನ್ಸರ್ಗೆ ಒಳಗಾಗುತ್ತಾರೆ. ಇದನ್ನು ಗುಣಪಡಿಸಲು ಯಾವುದೇ ನಿರ್ದಿಷ್ಟ ವೈದ್ಯಕೀಯ ಪರಿಕರಗಳು, ಪದ್ಧತಿ, ಚಿಕಿತ್ಸಾ ಮಾರ್ಗ ಲಭ್ಯವಿಲ್ಲ’ ಎಂದು ವಿವರಿಸಿದರು.</p>.<p>‘ಮಹಿಳೆಯರು ಪೌಷ್ಟಿಕ ಆಹಾರ ಸೇವಿಸಬೇಕು, ಆರೋಗ್ಯಕರ ಜೀವನ ಶೈಲಿ ಅಳವಡಿಸಿಕೊಳ್ಳಬೇಕು. ನಿಗದಿತ ಆರೋಗ್ಯ ತಪಾಸಣೆ ಮಾಡಿಸಬೇಕು. ಇದರಿಂದ ರೋಗವನ್ನು ನಿಯಂತ್ರಿಸಬಹುದಾಗಿದೆ’ ಎಂದು ಸಲಹೆ ನೀಡಿದರು.</p>.<p>‘ಸ್ತನ ಕ್ಯಾನ್ಸರ್ ಚಿಕಿತ್ಸೆ ಬಲು ದುಬಾರಿ. ಬಡವರು ಎಲ್ಲಿಂದ ಹಣ ತರುತ್ತಾರೆ? ಆ ನಿಟ್ಟಿನಲ್ಲಿ ಸ್ತನ ಕ್ಯಾನ್ಸರ್ ಕುರಿತು ಎಲ್ಲಾ ಸಂಸ್ಥೆಗಳು ಜಾಗೃತಿ ಮೂಡಿಸಬೇಕು’ ಎಂದರು.</p>.<p>ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಮಹಿಳಾ ಉದ್ಯೋಗಿಗಳಿಗಾಗಿ ವಿಶೇಷ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತರಾಗಿ ಬಹುಮಾನ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>