ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸರ್ಜಿಕಲ್ ಸೊಸೈಟಿ ಆಫ್ ಇಂಡಿಯಾದ ಅಧ್ಯಕ್ಷ ಡಾ.ರಾಜಶೇಖರ್ ಸಿ. ಜಾಕ, ‘ಈ ಜಾಗೃತಿ ನಡಿಗೆಗೆ ನವೋದಯ ಇನ್ ಬೆಂಗಳೂರು, ಸಂಕಲ್ಪ ಚೇಸ್ ಕ್ಯಾನ್ಸರ್ ಫೌಂಡೇಷನ್ ರೀಸರ್ಚ್ ಟ್ರಸ್ಟ್ ಕೂಡ ಸಹಯೋಗ ನೀಡಿವೆ. 5 ಕಿ.ಮೀ. ನಡೆಯುವ ವಾಕಥಾನ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಲಿದ್ದಾರೆ. ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ವಾಕಥಾನ್ ಹಮ್ಮಿಕೊಂಡಿದ್ದೇವೆ’ ಎಂದು ಹೇಳಿದರು.