ನೇರವಾಗಿ ತೆರಳಿ ಚಿಕಿತ್ಸೆ: ‘ಯಶಸ್ವಿನಿ’ ಯೋಜನೆಯಡಿ ಗರಿಷ್ಠ ₹ 5 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆ ಪಡೆಯಬಹುದಾಗಿದೆ. ‘ಆಯುಷ್ಮಾನ್ ಭಾರತ–ಆರೋಗ್ಯ ಕರ್ನಾಟಕ’ ಯೋಜನೆಯಡಿಯೂ ಇಷ್ಟೇ ಮೊತ್ತದ ಚಿಕಿತ್ಸೆ ಪಡೆಯಲು ಅವಕಾಶವಿದೆ. ಆದರೆ, ವ್ಯಕ್ತಿಯು ಮೊದಲು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ, ಅಲ್ಲಿ ಚಿಕಿತ್ಸೆ ಲಭ್ಯವಿರದಿದ್ದಲ್ಲಿ ಮಾತ್ರ ಶಿಫಾರಸು ಆಧಾರದಲ್ಲಿ ಬೇರೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಬೇಕಾಗುತ್ತದೆ. ಆದರೆ, ಯಶಸ್ವಿನಿ ಯೋಜನೆಯಡಿ ವ್ಯಕ್ತಿಯು ನೆಟ್ವರ್ಕ್ ಆಸ್ಪತ್ರೆಗಳಿಗೆ ನೇರವಾಗಿ ತೆರಳಿ, ಚಿಕಿತ್ಸೆ ಪಡೆದುಕೊಳ್ಳಬಹುದು. ಇದರಿಂದಾಗಿ ಯೋಜನೆಯ ಫಲಾನುಭವಿಗಳಿಗೆ ಚಿಕಿತ್ಸೆ ಸಾಧ್ಯವಾಗುತ್ತಿದೆ.