ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ; ನ್ಯಾಯಮೂರ್ತಿ ಕಾರು ಜಖಂ

Last Updated 3 ಜನವರಿ 2020, 22:28 IST
ಅಕ್ಷರ ಗಾತ್ರ

ಬೆಂಗಳೂರು: ಯಲಹಂಕ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಿಗ್ಗೆ ಅಪಘಾತ ಸಂಭವಿಸಿದ್ದು, ಸುಪ್ರಿಂಕೋರ್ಟ್ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಅವರು ಪ್ರಯಾಣಿಸುತ್ತಿದ್ದ ಕಾರು ಜಖಂಗೊಂಡಿದೆ.

‘ನ್ಯಾಯಮೂರ್ತಿಯವರು ಮನೆಯಿಂದ ದೇವನಹಳ್ಳಿಯತ್ತ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ. ಕಾರಿನ ಮುಂಭಾಗ ಹಾಗೂ ಹಿಂಭಾಗ ಮಾತ್ರ ಜಖಂಗೊಂಡಿದೆ. ಕಾರಿನಲ್ಲಿದ್ದ ನ್ಯಾಯಮೂರ್ತಿ ಹಾಗೂ ಚಾಲಕನಿಗೆ ಯಾವುದೇ ಗಾಯವಾಗಿಲ್ಲ’ ಎಂದುಯಲಹಂಕ ಸಂಚಾರ ಪೊಲೀಸರು ಹೇಳಿದರು.

‘ಬೆಳಿಗ್ಗೆ 8.45ರ ಸುಮಾರಿಗೆ ನ್ಯಾಯಮೂರ್ತಿಯವರು ಯಲಹಂಕ ನಿವಾಸದಿಂದ ಕಾರಿನಲ್ಲಿ ಹೊರಟಿದ್ದರು. ಅದೇ ಸಂದರ್ಭದಲ್ಲೇ ರಾಜು ಎಂಬಾತ ತನ್ನ ಕಾರಿನಲ್ಲಿ ಕೋಗಿಲು ಕ್ರಾಸ್ ಬಳಿ ಬಂದಿದ್ದ. ಭದ್ರತಾ ಸಿಬ್ಬಂದಿ ಸೂಚನೆ ನೀಡಿದರೂ ನಿಲ್ಲದೇ ನಿರ್ಲಕ್ಷ್ಯದಿಂದ ಕಾರು ಚಲಾಯಿಸಿ ನ್ಯಾಯಮೂರ್ತಿಯವರ ಕಾರಿಗೆ ಡಿಕ್ಕಿ ಹೊಡೆಸಿದ್ದ.’

‘ನ್ಯಾಯಮೂರ್ತಿಯವರ ಕಾರನ್ನು ಅದರ ಚಾಲಕ ಸ್ಥಳದಲ್ಲೇ ನಿಲ್ಲಿಸಿದ್ದ. ಹಿಂದೆಯೇ ಬರುತ್ತಿದ್ದ ಬೆಂಗಾವಲು ವಾಹನ ಸಹ ಆ ಕಾರಿಗೆ ಡಿಕ್ಕಿ ಹೊಡೆದಿತ್ತು. ಕಾರಿನ ಮುಂಭಾಗ ಹಾಗೂ ಹಿಂಭಾಗ ಎರಡೂ ಜಖಂಗೊಂಡವು’ ಎಂದು ಪೊಲೀಸರು ಹೇಳಿದರು.

ಚಾಲಕ ಬಂಧನ: ‘ಅಪಘಾತಕ್ಕೆ ಚಾಲಕ ರಾಜು ನಿರ್ಲಕ್ಷ್ಯವೇ ಕಾರಣವೆಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ. ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಲಾಗಿದೆ. ಕಾರನ್ನೂ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT