<p><strong>ಬೆಂಗಳೂರು: </strong>ಯಲಹಂಕ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಿಗ್ಗೆ ಅಪಘಾತ ಸಂಭವಿಸಿದ್ದು, ಸುಪ್ರಿಂಕೋರ್ಟ್ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಅವರು ಪ್ರಯಾಣಿಸುತ್ತಿದ್ದ ಕಾರು ಜಖಂಗೊಂಡಿದೆ.</p>.<p>‘ನ್ಯಾಯಮೂರ್ತಿಯವರು ಮನೆಯಿಂದ ದೇವನಹಳ್ಳಿಯತ್ತ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ. ಕಾರಿನ ಮುಂಭಾಗ ಹಾಗೂ ಹಿಂಭಾಗ ಮಾತ್ರ ಜಖಂಗೊಂಡಿದೆ. ಕಾರಿನಲ್ಲಿದ್ದ ನ್ಯಾಯಮೂರ್ತಿ ಹಾಗೂ ಚಾಲಕನಿಗೆ ಯಾವುದೇ ಗಾಯವಾಗಿಲ್ಲ’ ಎಂದುಯಲಹಂಕ ಸಂಚಾರ ಪೊಲೀಸರು ಹೇಳಿದರು.</p>.<p>‘ಬೆಳಿಗ್ಗೆ 8.45ರ ಸುಮಾರಿಗೆ ನ್ಯಾಯಮೂರ್ತಿಯವರು ಯಲಹಂಕ ನಿವಾಸದಿಂದ ಕಾರಿನಲ್ಲಿ ಹೊರಟಿದ್ದರು. ಅದೇ ಸಂದರ್ಭದಲ್ಲೇ ರಾಜು ಎಂಬಾತ ತನ್ನ ಕಾರಿನಲ್ಲಿ ಕೋಗಿಲು ಕ್ರಾಸ್ ಬಳಿ ಬಂದಿದ್ದ. ಭದ್ರತಾ ಸಿಬ್ಬಂದಿ ಸೂಚನೆ ನೀಡಿದರೂ ನಿಲ್ಲದೇ ನಿರ್ಲಕ್ಷ್ಯದಿಂದ ಕಾರು ಚಲಾಯಿಸಿ ನ್ಯಾಯಮೂರ್ತಿಯವರ ಕಾರಿಗೆ ಡಿಕ್ಕಿ ಹೊಡೆಸಿದ್ದ.’</p>.<p>‘ನ್ಯಾಯಮೂರ್ತಿಯವರ ಕಾರನ್ನು ಅದರ ಚಾಲಕ ಸ್ಥಳದಲ್ಲೇ ನಿಲ್ಲಿಸಿದ್ದ. ಹಿಂದೆಯೇ ಬರುತ್ತಿದ್ದ ಬೆಂಗಾವಲು ವಾಹನ ಸಹ ಆ ಕಾರಿಗೆ ಡಿಕ್ಕಿ ಹೊಡೆದಿತ್ತು. ಕಾರಿನ ಮುಂಭಾಗ ಹಾಗೂ ಹಿಂಭಾಗ ಎರಡೂ ಜಖಂಗೊಂಡವು’ ಎಂದು ಪೊಲೀಸರು ಹೇಳಿದರು.</p>.<p class="Subhead">ಚಾಲಕ ಬಂಧನ: ‘ಅಪಘಾತಕ್ಕೆ ಚಾಲಕ ರಾಜು ನಿರ್ಲಕ್ಷ್ಯವೇ ಕಾರಣವೆಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ. ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಲಾಗಿದೆ. ಕಾರನ್ನೂ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಯಲಹಂಕ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಿಗ್ಗೆ ಅಪಘಾತ ಸಂಭವಿಸಿದ್ದು, ಸುಪ್ರಿಂಕೋರ್ಟ್ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಅವರು ಪ್ರಯಾಣಿಸುತ್ತಿದ್ದ ಕಾರು ಜಖಂಗೊಂಡಿದೆ.</p>.<p>‘ನ್ಯಾಯಮೂರ್ತಿಯವರು ಮನೆಯಿಂದ ದೇವನಹಳ್ಳಿಯತ್ತ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ. ಕಾರಿನ ಮುಂಭಾಗ ಹಾಗೂ ಹಿಂಭಾಗ ಮಾತ್ರ ಜಖಂಗೊಂಡಿದೆ. ಕಾರಿನಲ್ಲಿದ್ದ ನ್ಯಾಯಮೂರ್ತಿ ಹಾಗೂ ಚಾಲಕನಿಗೆ ಯಾವುದೇ ಗಾಯವಾಗಿಲ್ಲ’ ಎಂದುಯಲಹಂಕ ಸಂಚಾರ ಪೊಲೀಸರು ಹೇಳಿದರು.</p>.<p>‘ಬೆಳಿಗ್ಗೆ 8.45ರ ಸುಮಾರಿಗೆ ನ್ಯಾಯಮೂರ್ತಿಯವರು ಯಲಹಂಕ ನಿವಾಸದಿಂದ ಕಾರಿನಲ್ಲಿ ಹೊರಟಿದ್ದರು. ಅದೇ ಸಂದರ್ಭದಲ್ಲೇ ರಾಜು ಎಂಬಾತ ತನ್ನ ಕಾರಿನಲ್ಲಿ ಕೋಗಿಲು ಕ್ರಾಸ್ ಬಳಿ ಬಂದಿದ್ದ. ಭದ್ರತಾ ಸಿಬ್ಬಂದಿ ಸೂಚನೆ ನೀಡಿದರೂ ನಿಲ್ಲದೇ ನಿರ್ಲಕ್ಷ್ಯದಿಂದ ಕಾರು ಚಲಾಯಿಸಿ ನ್ಯಾಯಮೂರ್ತಿಯವರ ಕಾರಿಗೆ ಡಿಕ್ಕಿ ಹೊಡೆಸಿದ್ದ.’</p>.<p>‘ನ್ಯಾಯಮೂರ್ತಿಯವರ ಕಾರನ್ನು ಅದರ ಚಾಲಕ ಸ್ಥಳದಲ್ಲೇ ನಿಲ್ಲಿಸಿದ್ದ. ಹಿಂದೆಯೇ ಬರುತ್ತಿದ್ದ ಬೆಂಗಾವಲು ವಾಹನ ಸಹ ಆ ಕಾರಿಗೆ ಡಿಕ್ಕಿ ಹೊಡೆದಿತ್ತು. ಕಾರಿನ ಮುಂಭಾಗ ಹಾಗೂ ಹಿಂಭಾಗ ಎರಡೂ ಜಖಂಗೊಂಡವು’ ಎಂದು ಪೊಲೀಸರು ಹೇಳಿದರು.</p>.<p class="Subhead">ಚಾಲಕ ಬಂಧನ: ‘ಅಪಘಾತಕ್ಕೆ ಚಾಲಕ ರಾಜು ನಿರ್ಲಕ್ಷ್ಯವೇ ಕಾರಣವೆಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ. ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಲಾಗಿದೆ. ಕಾರನ್ನೂ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>