‘ನಾಗರಾಜು ಅವರು ದ್ವಿಚಕ್ರ ವಾಹನದಲ್ಲಿ ರಾಜಾಜಿನಗರ ಕಡೆಯಿಂದ ವಿಜಯನಗರ ಕಡೆಗೆ ಮೋದಿ ಕೆಳಸೇತುವೆ ಬಳಿಯ ರಸ್ತೆ ಮೂಲಕ ತೆರಳುತ್ತಿದ್ದರು. ಇದೇ ಮಾರ್ಗದಲ್ಲಿ ಹೊರಟಿದ್ದ ಕುಶಾಲ್, ನಿರ್ಲಕ್ಷ್ಯದಿಂದ ಅತಿ ವೇಗವಾಗಿ ಕಾರು ಚಲಾಯಿಸಿದ್ದರು. ಅದೇ ಕಾರು, ಬೈಕ್ಗೆ ಗುದ್ದಿತ್ತು. ದ್ವಿಚಕ್ರ ವಾಹನ ಸಮೇತ ಬಿದ್ದಿದ್ದ ನಾಗರಾಜು ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು.’