ಭಾನುವಾರ ಬೆಳಿಗ್ಗೆ 6.30ರ ಸುಮಾರಿಗೆ ಇಬ್ಬರೂ ಕೆಲಸಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದರು. ರುದ್ರಸ್ವಾಮಿ ಅವರು ಬೈಕ್ ಚಲಾಯಿಸುತ್ತಿದ್ದರು. ಹೊಸೂರು ಮುಖ್ಯರಸ್ತೆಯ ತಿಮ್ಮಾರೆಡ್ಡಿ ಶಾಲೆ ಮುಂಭಾಗ ತೆರಳುತ್ತಿದ್ದರು. ಈ ವೇಳೆ ಹಿಂಬದಿ ವೇಗವಾಗಿ ಬಂದ ಕಾರು, ಬೈಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ರಸ್ತೆ ವಿಭಜಕದ ಗ್ರಿಲ್ ಗೆ ಡಿಕ್ಕಿ ಹೊಡೆದು ಇಬ್ಬರು ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.