ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಕಾರು ಗುದ್ದಿ ವೃದ್ಧೆ ಸಾವು

Last Updated 8 ನವೆಂಬರ್ 2022, 19:31 IST
ಅಕ್ಷರ ಗಾತ್ರ

ಬೆಂಗಳೂರು: ಯಲಹಂಕ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಕಾರು ಗುದ್ದಿ ತೀವ್ರ ಗಾಯಗೊಂಡಿದ್ದ ವೃದ್ಧೆ ಮುನಿಯಮ್ಮ (75) ಅವರು ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ಸಂಜೆ ಮೃತಪಟ್ಟಿದ್ದಾರೆ.

‘ನ. 6ರಂದು ನಡೆದಿದ್ದ ಅಪಘಾತದಲ್ಲಿ ಗಾಯಗೊಂಡಿದ್ದ ಮುನಿಯಮ್ಮ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ತೀರಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಜಕ್ಕೂರು ಲೇಔಟ್ ನಿವಾಸಿ ಮುನಿಯಮ್ಮ, ಮೊಮ್ಮಗಳ ಜೊತೆಯಲ್ಲಿ ಶಿಡ್ಲಘಟ್ಟದಿಂದ ಬೆಂಗಳೂರಿಗೆ ಬಂದಿದ್ದರು. ಬಳ್ಳಾರಿ ರಸ್ತೆಯಲ್ಲಿ ಬಸ್‌ನಿಂದ ಇಳಿದು ಮನೆಯತ್ತ ನಡೆದುಕೊಂಡು ಹೊರಟಿದ್ದರು. ಅದೇ ಸಂದರ್ಭದಲ್ಲೇ ಕಾರೊಂದು ಮುನಿಯಮ್ಮ ಅವರಿಗೆ ಗುದ್ದಿತ್ತು. ಅವರು ರಸ್ತೆಯಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಅದೃಷ್ಟವಶಾತ್ ಮೊಮ್ಮಗಳು ಅಪಾಯದಿಂದ ಪಾರಾಗಿದ್ದಾರೆ.’

‘ಚಾಲಕನ ಅತಿ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ. ಕಾರು ನಿಲ್ಲಿಸದೇ ಚಾಲಕ ಪರಾರಿಯಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT