ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ; ಪ್ರಭಾವಿಗಳ ಮಕ್ಕಳ ಗಲಾಟೆ

Last Updated 10 ಮಾರ್ಚ್ 2020, 22:01 IST
ಅಕ್ಷರ ಗಾತ್ರ

ಬೆಂಗಳೂರು: ರಾಜಕಾರಣಿಯೊಬ್ಬರ ಪುತ್ರ ಸೇರಿ ಪ್ರಭಾವಿಗಳ ಮಕ್ಕಳಿದ್ದ ಕಾರು, ಎದುರಿಗೆ ಇನ್ನೊಂದು ಕಾರಿಗೆ ಗುದ್ದಿ ಅಪಘಾತವನ್ನುಂಟು ಮಾಡಿದ ಘಟನೆ ಚಾಲುಕ್ಯ ವೃತ್ತದಲ್ಲಿ ಮಂಗಳವಾರ ಸಂಭವಿಸಿದೆ.

ಇದರಿಂದ ಎರಡೂ ಗುಂಪಿನ ನಡುವೆ ವಾಗ್ವಾದ ನಡೆದು, ಕೈ ಕೈ ಮಿಲಾಯಿಸುವ ಹಂತ ತಲುಪಿತ್ತು. ಸ್ಥಳಕ್ಕೆ ಬಂದ ಹೈಗ್ರೌಂಡ್ಸ್‌ ಠಾಣೆ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು ಎಂದು ಪ್ರತ್ಯಕ್ಷದರ್ಶಿ ಒಬ್ಬರು ಹೇಳಿದರು.

ಗಲಾಟೆ ಬಳಿಕ ರಾಜಕಾರಣಿ ಪುತ್ರ, ಆತನ ಸ್ನೇಹಿತರನ್ನು ಪೊಲೀಸರು ಸ್ಥಳದಿಂದ ಕಳುಹಿಸಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ತಡರಾತ್ರಿಯವರೆಗೆ ಯಾವುದೇ ದೂರು ದಾಖಲಾಗಿಲ್ಲ.

‘ಘಟನೆಯಲ್ಲಿ ಎರಡೂ ಕಾರುಗಳು ಜಖಂಗೊಂಡಿವೆ. ರಾಜಕಾರಣಿ ಪುತ್ರನಿದ್ದ ಕಾರಿನ ಚಾಲಕನಿಗೆ ತೀವ್ರ ಗಾಯವಾಗಿದೆ ಎಂದು ತಿಳಿದುಬಂದಿದೆ.

‘ಎರಡು ಕಾರಿನವರು ಪರಸ್ಪರ ಪರಸ್ಪರ ಹೊಡೆದಾಡಿಕೊಂಡರು. ಅಷ್ಟರಲ್ಲೇ ಹೈಗ್ರೌಂಡ್ಸ್ ಠಾಣೆ ಪೊಲೀಸರು ಸ್ಥಳಕ್ಕೆ ಬಂದಿದ್ದರು’ ಎಂದು ಪ್ರತ್ಯಕ್ಷದರ್ಶಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT