<p><strong>ಬೆಂಗಳೂರು: </strong>ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದರಿಂದ ವ್ಯಕ್ತಿಯೊಬ್ಬರು ಸಜೀವ ದಹನವಾಗಿದ್ದಾರೆ.</p>.<p>‘ಮೃತ ವ್ಯಕ್ತಿಯನ್ನು ಉತ್ತರಹಳ್ಳಿಯ ದರ್ಶನ್ (40) ಎಂದು ಗುರುತಿಸಲಾಗಿದೆ. ಇವರು ಬಿಪಿಒ ಕಂಪನಿಯೊಂದರ ಉದ್ಯೋಗಿಯಾಗಿದ್ದರು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>‘ತುಮಕೂರು ರಸ್ತೆಯಲ್ಲಿರುವ ಸಂಬಂಧಿಕರ ಮನೆಯಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ದರ್ಶನ್, ಶನಿವಾರ ರಾತ್ರಿ 10.30ರ ಸುಮಾರಿಗೆ ಸ್ಯಾಂಟ್ರೊ ಕಾರಿನಲ್ಲಿ ಮನೆಗೆ ಮರಳುತ್ತಿದ್ದರು. ನೈಸ್ ರಸ್ತೆಯ ಚನ್ನಸಂದ್ರ ಸೇತುವೆ ಬಳಿ ಬಂದಾಗ ಕಾರಿನಲ್ಲಿ ಬೆಂಕಿ ಕಾಣಿಸಿದೆ. ಬಳಿಕ ಕಾರು ಹೊತ್ತಿ ಉರಿದಿದೆ. ಆ ಮಾರ್ಗದಲ್ಲಿ ಹೋಗುತ್ತಿದ್ದವರು ಇದನ್ನು ಗಮನಿಸಿ ನೈಸ್ ಸಂಸ್ಥೆಯ ತುರ್ತು ನೆರವು ತಂಡಕ್ಕೆ ಮಾಹಿತಿ ನೀಡಿದ್ದರು. ಅವರು ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯೂ ಕಾರ್ಯಾಚರಣೆ ನಡೆಸಿದ್ದಾರೆ. ಅಷ್ಟರಲ್ಲಾಗಲೇ ಕಾರು ಸುಟ್ಟು ಕರಕಲಾಗಿತ್ತು’ ಎಂದು ವಿವರಿಸಿದ್ದಾರೆ.</p>.<p>‘ಬೆಂಕಿ ಅವಘಡಕ್ಕೆ ನಿಖರ ಕಾರಣ ಗೊತ್ತಿಲ್ಲ. ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದೇವೆ. ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ಅಧಿಕಾರಿಗಳೂ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದರಿಂದ ವ್ಯಕ್ತಿಯೊಬ್ಬರು ಸಜೀವ ದಹನವಾಗಿದ್ದಾರೆ.</p>.<p>‘ಮೃತ ವ್ಯಕ್ತಿಯನ್ನು ಉತ್ತರಹಳ್ಳಿಯ ದರ್ಶನ್ (40) ಎಂದು ಗುರುತಿಸಲಾಗಿದೆ. ಇವರು ಬಿಪಿಒ ಕಂಪನಿಯೊಂದರ ಉದ್ಯೋಗಿಯಾಗಿದ್ದರು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>‘ತುಮಕೂರು ರಸ್ತೆಯಲ್ಲಿರುವ ಸಂಬಂಧಿಕರ ಮನೆಯಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ದರ್ಶನ್, ಶನಿವಾರ ರಾತ್ರಿ 10.30ರ ಸುಮಾರಿಗೆ ಸ್ಯಾಂಟ್ರೊ ಕಾರಿನಲ್ಲಿ ಮನೆಗೆ ಮರಳುತ್ತಿದ್ದರು. ನೈಸ್ ರಸ್ತೆಯ ಚನ್ನಸಂದ್ರ ಸೇತುವೆ ಬಳಿ ಬಂದಾಗ ಕಾರಿನಲ್ಲಿ ಬೆಂಕಿ ಕಾಣಿಸಿದೆ. ಬಳಿಕ ಕಾರು ಹೊತ್ತಿ ಉರಿದಿದೆ. ಆ ಮಾರ್ಗದಲ್ಲಿ ಹೋಗುತ್ತಿದ್ದವರು ಇದನ್ನು ಗಮನಿಸಿ ನೈಸ್ ಸಂಸ್ಥೆಯ ತುರ್ತು ನೆರವು ತಂಡಕ್ಕೆ ಮಾಹಿತಿ ನೀಡಿದ್ದರು. ಅವರು ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯೂ ಕಾರ್ಯಾಚರಣೆ ನಡೆಸಿದ್ದಾರೆ. ಅಷ್ಟರಲ್ಲಾಗಲೇ ಕಾರು ಸುಟ್ಟು ಕರಕಲಾಗಿತ್ತು’ ಎಂದು ವಿವರಿಸಿದ್ದಾರೆ.</p>.<p>‘ಬೆಂಕಿ ಅವಘಡಕ್ಕೆ ನಿಖರ ಕಾರಣ ಗೊತ್ತಿಲ್ಲ. ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದೇವೆ. ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ಅಧಿಕಾರಿಗಳೂ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>