‘ತುಮಕೂರು ರಸ್ತೆಯಲ್ಲಿರುವ ಸಂಬಂಧಿಕರ ಮನೆಯಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ದರ್ಶನ್, ಶನಿವಾರ ರಾತ್ರಿ 10.30ರ ಸುಮಾರಿಗೆ ಸ್ಯಾಂಟ್ರೊ ಕಾರಿನಲ್ಲಿ ಮನೆಗೆ ಮರಳುತ್ತಿದ್ದರು. ನೈಸ್ ರಸ್ತೆಯ ಚನ್ನಸಂದ್ರ ಸೇತುವೆ ಬಳಿ ಬಂದಾಗ ಕಾರಿನಲ್ಲಿ ಬೆಂಕಿ ಕಾಣಿಸಿದೆ. ಬಳಿಕ ಕಾರು ಹೊತ್ತಿ ಉರಿದಿದೆ. ಆ ಮಾರ್ಗದಲ್ಲಿ ಹೋಗುತ್ತಿದ್ದವರು ಇದನ್ನು ಗಮನಿಸಿ ನೈಸ್ ಸಂಸ್ಥೆಯ ತುರ್ತು ನೆರವು ತಂಡಕ್ಕೆ ಮಾಹಿತಿ ನೀಡಿದ್ದರು. ಅವರು ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯೂ ಕಾರ್ಯಾಚರಣೆ ನಡೆಸಿದ್ದಾರೆ. ಅಷ್ಟರಲ್ಲಾಗಲೇ ಕಾರು ಸುಟ್ಟು ಕರಕಲಾಗಿತ್ತು’ ಎಂದು ವಿವರಿಸಿದ್ದಾರೆ.