<p><strong>ಬೆಂಗಳೂರು</strong>: ಕಾರು ಖರೀದಿ ನೆಪದಲ್ಲಿ ಕರ್ನಾಟಕ ಹಾಗೂ ಕೇರಳದ ಉದ್ಯಮಿಗಳನ್ನು ವಂಚಿಸಲಾಗಿದ್ದು, ಈ ಸಂಬಂಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ತಮಗಾದ ವಂಚನೆ ಬಗ್ಗೆ ಉದ್ಯಮಿ ಜಾರ್ಜ್ ಥಾಮಸ್ ಎಂಬುವರು ದೂರು ನೀಡಿದ್ದಾರೆ. ಅದರನ್ವಯ ಆರೋಪಿಗಳಾದ ಕೇರಳದ ಕೆ.ಪಿ.ಅಮ್ಜದ್ ಹಾಗೂ ಖುಷಿ ಜಾನ್ ಎಂಬುವರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದರು.</p>.<p>‘ಹೊಸ ಕಾರು ಖರೀದಿಸಿದ್ದ ಜಾರ್ಜ್, ತಮ್ಮ ಹಳೆ ಬೆನ್ಜ್ ಕಾರನ್ನು ಮಾರಲು ಮುಂದಾಗಿದ್ದರು. ₹48 ಲಕ್ಷಕ್ಕೆ ಕಾರು ಖರೀದಿಸುವ ಮಾತುಕತೆ ನಡೆಸಿದ್ದ ಆರೋಪಿಗಳು, ಕೆಲ ದಿನ ಬಿಟ್ಟು ಹಣ ನೀಡುವುದಾಗಿ ಹೇಳಿ ಕಾರು ತೆಗೆದುಕೊಂಡು ಹೋಗಿದ್ದರು.’</p>.<p>‘ನಿಗದಿತ ದಿನದಂದು ಹಣ ನೀಡಿರಲಿಲ್ಲ. ಕಾರನ್ನೂ ವಾಪಸು ಕೊಟ್ಟಿರಲಿಲ್ಲ. ಅದನ್ನು ಕೇಳಿದ್ದಕ್ಕೆ ಆರೋಪಿಗಳು ದೂರುದಾರರಿಗೆ ಬೆದರಿಕೆ ಹಾಕಿದ್ದರು. ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದ್ದರಿಂದ ಕಾರನ್ನು ವಾಪಸು ಕೊಟ್ಟಿದ್ದರು. ಆದರೆ, ಕಾರು ಕೆಟ್ಟಿತ್ತು. ಅದರ ದುರಸ್ತಿಗೆ ₹18 ಲಕ್ಷ ಖರ್ಚಾಗಿತ್ತು. ಈ ಸಂಗತಿಯನ್ನು ಜಾರ್ಜ್ ಅವರು ದೂರಿನಲ್ಲಿ ತಿಳಿಸಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p class="Subhead"><strong>ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿಯೆಂದು ಪರಿಚಯ</strong></p>.<p class="Subhead">'ಜಾರ್ಜ್ ಥಾಮಸ್ ಅವರಷ್ಟೇ ಅಲ್ಲದೆ, ಕರ್ನಾಟಕ ಹಾಗೂ ಕೇರಳದ ಹಲವು ಉದ್ಯಮಿಗಳಿಂದ ಕಾರು ಖರೀದಿಸಿ ಆರೋಪಿಗಳು ವಂಚಿಸಿದ್ದಾರೆ. ತಾನು ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ಎಂದೇ ಅಮ್ಜದ್ ಉದ್ಯಮಿಗಳನ್ನು ಪರಿಚಯಿಸಿಕೊಳ್ಳುತ್ತಿದ್ದ. ಸ್ವಾಮೀಜಿ ಜೊತೆಗೆ ತೆಗೆಸಿಕೊಂಡಿದ್ದ ಫೋಟೊವನ್ನು ತೋರಿಸಿ ನಂಬಿಸುತ್ತಿದ್ದ. ಈ ಸಂಗತಿ ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಆರೋಪಿಗಳು ಅಂಗರಕ್ಷಕರನ್ನೂ ಇಟ್ಟುಕೊಂಡು ಓಡಾಡುತ್ತಿದ್ದರು. ದೂರು ದಾಖಲಾಗುತ್ತಿದ್ದಂತೆ ಕೇರಳಕ್ಕೆ ಹೋಗಿ ತಲೆಮರೆಸಿಕೊಂಡಿರುವ ಮಾಹಿತಿ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಾರು ಖರೀದಿ ನೆಪದಲ್ಲಿ ಕರ್ನಾಟಕ ಹಾಗೂ ಕೇರಳದ ಉದ್ಯಮಿಗಳನ್ನು ವಂಚಿಸಲಾಗಿದ್ದು, ಈ ಸಂಬಂಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ತಮಗಾದ ವಂಚನೆ ಬಗ್ಗೆ ಉದ್ಯಮಿ ಜಾರ್ಜ್ ಥಾಮಸ್ ಎಂಬುವರು ದೂರು ನೀಡಿದ್ದಾರೆ. ಅದರನ್ವಯ ಆರೋಪಿಗಳಾದ ಕೇರಳದ ಕೆ.ಪಿ.ಅಮ್ಜದ್ ಹಾಗೂ ಖುಷಿ ಜಾನ್ ಎಂಬುವರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದರು.</p>.<p>‘ಹೊಸ ಕಾರು ಖರೀದಿಸಿದ್ದ ಜಾರ್ಜ್, ತಮ್ಮ ಹಳೆ ಬೆನ್ಜ್ ಕಾರನ್ನು ಮಾರಲು ಮುಂದಾಗಿದ್ದರು. ₹48 ಲಕ್ಷಕ್ಕೆ ಕಾರು ಖರೀದಿಸುವ ಮಾತುಕತೆ ನಡೆಸಿದ್ದ ಆರೋಪಿಗಳು, ಕೆಲ ದಿನ ಬಿಟ್ಟು ಹಣ ನೀಡುವುದಾಗಿ ಹೇಳಿ ಕಾರು ತೆಗೆದುಕೊಂಡು ಹೋಗಿದ್ದರು.’</p>.<p>‘ನಿಗದಿತ ದಿನದಂದು ಹಣ ನೀಡಿರಲಿಲ್ಲ. ಕಾರನ್ನೂ ವಾಪಸು ಕೊಟ್ಟಿರಲಿಲ್ಲ. ಅದನ್ನು ಕೇಳಿದ್ದಕ್ಕೆ ಆರೋಪಿಗಳು ದೂರುದಾರರಿಗೆ ಬೆದರಿಕೆ ಹಾಕಿದ್ದರು. ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದ್ದರಿಂದ ಕಾರನ್ನು ವಾಪಸು ಕೊಟ್ಟಿದ್ದರು. ಆದರೆ, ಕಾರು ಕೆಟ್ಟಿತ್ತು. ಅದರ ದುರಸ್ತಿಗೆ ₹18 ಲಕ್ಷ ಖರ್ಚಾಗಿತ್ತು. ಈ ಸಂಗತಿಯನ್ನು ಜಾರ್ಜ್ ಅವರು ದೂರಿನಲ್ಲಿ ತಿಳಿಸಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p class="Subhead"><strong>ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿಯೆಂದು ಪರಿಚಯ</strong></p>.<p class="Subhead">'ಜಾರ್ಜ್ ಥಾಮಸ್ ಅವರಷ್ಟೇ ಅಲ್ಲದೆ, ಕರ್ನಾಟಕ ಹಾಗೂ ಕೇರಳದ ಹಲವು ಉದ್ಯಮಿಗಳಿಂದ ಕಾರು ಖರೀದಿಸಿ ಆರೋಪಿಗಳು ವಂಚಿಸಿದ್ದಾರೆ. ತಾನು ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ಎಂದೇ ಅಮ್ಜದ್ ಉದ್ಯಮಿಗಳನ್ನು ಪರಿಚಯಿಸಿಕೊಳ್ಳುತ್ತಿದ್ದ. ಸ್ವಾಮೀಜಿ ಜೊತೆಗೆ ತೆಗೆಸಿಕೊಂಡಿದ್ದ ಫೋಟೊವನ್ನು ತೋರಿಸಿ ನಂಬಿಸುತ್ತಿದ್ದ. ಈ ಸಂಗತಿ ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಆರೋಪಿಗಳು ಅಂಗರಕ್ಷಕರನ್ನೂ ಇಟ್ಟುಕೊಂಡು ಓಡಾಡುತ್ತಿದ್ದರು. ದೂರು ದಾಖಲಾಗುತ್ತಿದ್ದಂತೆ ಕೇರಳಕ್ಕೆ ಹೋಗಿ ತಲೆಮರೆಸಿಕೊಂಡಿರುವ ಮಾಹಿತಿ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>