‘ಸ್ಥಳೀಯ ನಿವಾಸಿ ಶ್ರೀನಿವಾಸ್ ಎಂಬುವರು ಮನೆ ಎದುರು ಇನ್ನೋವಾ ಕಾರು ನಿಲ್ಲಿಸಿದ್ದರು. ಅದರ ಪಕ್ಕದಲ್ಲೇ ಬಾಡಿಗೆದಾರ ಮಧುಕರ್ ಎಂಬುವರ ಸ್ವಿಫ್ಟ್ ಕಾರು ಇತ್ತು. ಕಾರಿನಲ್ಲಿ ಸ್ಥಳಕ್ಕೆ ಬಂದಿದ್ದ ದುಷ್ಕರ್ಮಿಗಳು, ಲಾಂಗು ಹಾಗೂ ಮಚ್ಚುಗಳಿಂದ ಶ್ರೀನಿವಾಸ್ ಅವರ ಕಾರಿಗೆ ಹೊಡೆದು ಜಖಂಗೊಳಿಸಿದ್ದಾರೆ. ಗಾಜುಗಳನ್ನು ಒಡೆದು ಹಾಕಿದ್ದಾರೆ’ ಎಂದು ಪೊಲೀಸರು ಹೇಳಿದರು.