ತಿಲಕನಗರದ ಮುಖ್ಯರಸ್ತೆಯ ಪೊಲೀಸ್ ಠಾಣೆ ಮುಂಭಾಗದಲ್ಲಿ ರಸ್ತೆ ಬದಿ ನಿಂತಿದ್ದ ಸರಕು ಸಾಗಣೆ ಆಟೊದ ಹಿಂಬದಿಗೆ ವಕೀಲೆ ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿತ್ತು. ಅದನ್ನು ಗಮನಿಸಿದ ಸ್ಥಳೀಯರು, ಕಾರಿನಲ್ಲಿದ್ದ ವಕೀಲೆಯನ್ನು ರಕ್ಷಿಸಲು ಪ್ರಯತ್ನಿಸಿದ್ದರು. ಆದರೆ, ಅವರು ಕಾರಿನಿಂದ ಕೆಳಗೆ ಇಳಿಯಲಿಲ್ಲ. ಸ್ಥಳಕ್ಕೆ ಬಂದ ಪೊಲೀಸರು ಸೂಚಿಸಿದರೂ, ಕಾರಿನಿಂದ ಇಳಿಯದ ವಕೀಲೆ, ಪೊಲೀಸರ ಜತೆ ರಂಪಾಟ ನಡೆಸಿದ್ದಾರೆ.