<p><strong>ಬೆಂಗಳೂರು: </strong>ಸಮಾಜ ಕಲ್ಯಾಣ ಇಲಾಖೆಯ ಯೋಜನೆಗಳಾದ ಐರಾವತ ಹಾಗೂ ಉನ್ನತಿ ಕಾರ್ಯಕ್ರಮಗಳಡಿ 96 ಫಲಾನುಭವಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಸೌಲಭ್ಯಗಳನ್ನು ವಿತರಿಸಿದರು.</p>.<p>ಐರಾವತ ಯೋಜನೆಯಡಿ ಉಬರ್ ಟ್ಯಾಕ್ಸಿ ಸಂಸ್ಥೆಯೊಂದಿಗೆ ಮಾಡಿಕೊಂಡಿರುವ ಒಪ್ಪಂದದಂತೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ 75 ಮಂದಿ ತಲಾ ₹ 5 ಲಕ್ಷ ಮೊತ್ತದ ಕಾರುಗಳನ್ನು ಪಡೆದು ಅವುಗಳ ಒಡೆಯರಾದರು. ಒಟ್ಟಾರೆ ಈ ಕಾರ್ಯಕ್ರಮದಡಿ ವಾಹನಗಳ ಖರೀದಿಗೆ ₹3.75 ಕೋಟಿ ವೆಚ್ಚ ಮಾಡಲಾಗಿದೆ. ಉನ್ನತಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಯುವಜನರ ನವೋದ್ಯಮಗಳಿಗೆ ಧನಸಹಾಯ ಮಾಡಲಾಗುತ್ತಿದ್ದು, 21 ಮಂದಿಗೆ ಸಚಿವರು ₹3.75 ಕೋಟಿ ನಗದು ಸಹಾಯದ ಚೆಕ್ ವಿತರಿಸಿದರು.</p>.<p>‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಯುವಜನರು ಆರ್ಥಿಕರಾಗಿ ಸಬಲರಾಗಬೇಕೆಂಬುದು ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯಾಗಿದ್ದು, ಅದರಂತೆ ಸಮಾಜ ಕಲ್ಯಾಣ ಇಲಾಖೆಯ ಮೂಲಕ ವಿನೂತನ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಪ್ರಿಯಾಂಕ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಮಾಜ ಕಲ್ಯಾಣ ಇಲಾಖೆಯ ಯೋಜನೆಗಳಾದ ಐರಾವತ ಹಾಗೂ ಉನ್ನತಿ ಕಾರ್ಯಕ್ರಮಗಳಡಿ 96 ಫಲಾನುಭವಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಸೌಲಭ್ಯಗಳನ್ನು ವಿತರಿಸಿದರು.</p>.<p>ಐರಾವತ ಯೋಜನೆಯಡಿ ಉಬರ್ ಟ್ಯಾಕ್ಸಿ ಸಂಸ್ಥೆಯೊಂದಿಗೆ ಮಾಡಿಕೊಂಡಿರುವ ಒಪ್ಪಂದದಂತೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ 75 ಮಂದಿ ತಲಾ ₹ 5 ಲಕ್ಷ ಮೊತ್ತದ ಕಾರುಗಳನ್ನು ಪಡೆದು ಅವುಗಳ ಒಡೆಯರಾದರು. ಒಟ್ಟಾರೆ ಈ ಕಾರ್ಯಕ್ರಮದಡಿ ವಾಹನಗಳ ಖರೀದಿಗೆ ₹3.75 ಕೋಟಿ ವೆಚ್ಚ ಮಾಡಲಾಗಿದೆ. ಉನ್ನತಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಯುವಜನರ ನವೋದ್ಯಮಗಳಿಗೆ ಧನಸಹಾಯ ಮಾಡಲಾಗುತ್ತಿದ್ದು, 21 ಮಂದಿಗೆ ಸಚಿವರು ₹3.75 ಕೋಟಿ ನಗದು ಸಹಾಯದ ಚೆಕ್ ವಿತರಿಸಿದರು.</p>.<p>‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಯುವಜನರು ಆರ್ಥಿಕರಾಗಿ ಸಬಲರಾಗಬೇಕೆಂಬುದು ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯಾಗಿದ್ದು, ಅದರಂತೆ ಸಮಾಜ ಕಲ್ಯಾಣ ಇಲಾಖೆಯ ಮೂಲಕ ವಿನೂತನ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಪ್ರಿಯಾಂಕ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>