ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐರಾವತ ಯೋಜನೆ: 75 ಕಾರುಗಳ ವಿತರಣೆ

Last Updated 6 ಮಾರ್ಚ್ 2019, 19:55 IST
ಅಕ್ಷರ ಗಾತ್ರ

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಯೋಜನೆಗಳಾದ ಐರಾವತ ಹಾಗೂ ಉನ್ನತಿ ಕಾರ್ಯಕ್ರಮಗಳಡಿ 96 ಫಲಾನುಭವಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಬುಧವಾರ ಸೌಲಭ್ಯಗಳನ್ನು ವಿತರಿಸಿದರು.

ಐರಾವತ ಯೋಜನೆಯಡಿ ಉಬರ್ ಟ್ಯಾಕ್ಸಿ ಸಂಸ್ಥೆಯೊಂದಿಗೆ ಮಾಡಿಕೊಂಡಿರುವ ಒಪ್ಪಂದದಂತೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ 75 ಮಂದಿ ತಲಾ ₹ 5 ಲಕ್ಷ ಮೊತ್ತದ ಕಾರುಗಳನ್ನು ಪಡೆದು ಅವುಗಳ ಒಡೆಯರಾದರು. ಒಟ್ಟಾರೆ ಈ ಕಾರ್ಯಕ್ರಮದಡಿ ವಾಹನಗಳ ಖರೀದಿಗೆ ₹3.75 ಕೋಟಿ ವೆಚ್ಚ ಮಾಡಲಾಗಿದೆ. ಉನ್ನತಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಯುವಜನರ ನವೋದ್ಯಮಗಳಿಗೆ ಧನಸಹಾಯ ಮಾಡಲಾಗುತ್ತಿದ್ದು, 21 ಮಂದಿಗೆ ಸಚಿವರು ₹3.75 ಕೋಟಿ ನಗದು ಸಹಾಯದ ಚೆಕ್ ವಿತರಿಸಿದರು.

‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಯುವಜನರು ಆರ್ಥಿಕರಾಗಿ ಸಬಲರಾಗಬೇಕೆಂಬುದು ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯಾಗಿದ್ದು, ಅದರಂತೆ ಸಮಾಜ ಕಲ್ಯಾಣ ಇಲಾಖೆಯ ಮೂಲಕ ವಿನೂತನ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಪ್ರಿಯಾಂಕ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT