<p><strong>ಬೆಂಗಳೂರು:</strong> ಜನರ ಸಂಪಾದಕೀಯ ಎಂದೇ ಬಣ್ಣಿಸಲ್ಪಟ್ಟಿದ್ದ ವ್ಯಂಗ್ಯಚಿತ್ರಗಳು ಮೊನಚು ಕಳೆದುಕೊಳ್ಳುತ್ತಿವೆ ಎಂದು ಪತ್ರಕರ್ತ ಜಿ.ಎನ್. ಮೋಹನ್ ವಿಷಾದಿಸಿದರು.</p>.<p>ಕರ್ನಾಟಕ ವ್ಯಂಗ್ಯಚಿತ್ರಕಾರರ ಸಂಘ ಶನಿವಾರ ನಗರದಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ವ್ಯಂಗ್ಯಚಿತ್ರ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ವ್ಯಂಗ್ಯಚಿತ್ರಗಳು ಜನಸಾಮಾನ್ಯರ ಮನಸ್ಸನ್ನು ಬಿಂಬಿಸುವ ಕನ್ನಡಿಯಾದ ಕಾರಣದಿಂದಲೇ ಅದನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಆಳುವ ವರ್ಗ ಸದಾ ಯತ್ನಿಸುತ್ತಲೇ ಇರುತ್ತದೆ. ಈಗಾಗಲೇ ವ್ಯಂಗ್ಯಚಿತ್ರಗಳನ್ನು ಕೇವಲ ಚಿತ್ರವಾಗಿಸುವ ಹುನ್ನಾರ ನಡೆದಿದೆ ಎಂದರು.</p>.<p>ಇಂದು ವ್ಯಂಗ್ಯಚಿತ್ರಗಳನ್ನು ಬಿಟ್ಟ ಜಾಗವನ್ನು ತುಂಬುವ ಪದಾರ್ಥದಂತೆ ಬಳಸಲಾಗುತ್ತಿರುವುದು ದುರದೃಷ್ಟಕರ ಎಂದು ಹೇಳಿದರು.</p>.<p>ಪ್ರದರ್ಶನವನ್ನು ಉದ್ಘಾಟಿಸಿದ ವ್ಯಂಗ್ಯಚಿತ್ರಕಾರ ಬಿ.ವಿ. ಪಾಂಡುರಂಗ ರಾವ್ ಅವರು ವ್ಯಂಗ್ಯಚಿತ್ರಕಾರರ ಸಂಘ ನಡೆದು ಬಂದ ಹಾದಿಯನ್ನು ನೆನಪು ಮಾಡಿಕೊಂಡರು.</p>.<p>ವ್ಯಂಗ್ಯಚಿತ್ರಕಾರರ ಸಂಘದ ಅಧ್ಯಕ್ಷ ನಂಜುಂಡಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ವ್ಯಂಗ್ಯಚಿತ್ರ ಕ್ಷೇತ್ರದಲ್ಲಿ ಯುವ ತಲೆಮಾರು ಹೆಚ್ಚಿನ ಆಸಕ್ತಿ ವಹಿಸಲು ಸಾಧ್ಯವಾಗುವಂತೆ ವ್ಯಂಗ್ಯಚಿತ್ರ ಪ್ರದರ್ಶನ, ಸಂಕಿರಣ, ಕಮ್ಮಟಗಳನ್ನು ಆಯೋಜಿಸಲಾಗುವುದು’ ಎಂದರು.</p>.<p>ಹಿರಿಯ ವ್ಯಂಗ್ಯ ಚಿತ್ರಕಾರರಾದ ಬಿ.ಜಿ. ಗುಜ್ಜಾರಪ್ಪ, ವಿ.ಆರ್. ಸಿ ಶೇಖರ್, ರಾಮಧ್ಯಾನಿ, ಎಚ್.ಬಿ. ಮಂಜುನಾಥ್. ಜೇಮ್ಸ್ ವಾಜ್ ಅವರನ್ನು ಸನ್ಮಾನಿಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಎಸ್. ನಾಗನಾಥ್, ಸಂಕೇತ ಗುರುದತ್ತ, ಎಂ. ವಿಶ್ವನಾಥ್ ಉಪಸ್ಥಿತರಿದ್ದರು.</p>.<p>ವ್ಯಂಗ್ಯಚಿತ್ರ ಪ್ರದರ್ಶನವು ಫೆ.9ರವರೆಗೆ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜನರ ಸಂಪಾದಕೀಯ ಎಂದೇ ಬಣ್ಣಿಸಲ್ಪಟ್ಟಿದ್ದ ವ್ಯಂಗ್ಯಚಿತ್ರಗಳು ಮೊನಚು ಕಳೆದುಕೊಳ್ಳುತ್ತಿವೆ ಎಂದು ಪತ್ರಕರ್ತ ಜಿ.ಎನ್. ಮೋಹನ್ ವಿಷಾದಿಸಿದರು.</p>.<p>ಕರ್ನಾಟಕ ವ್ಯಂಗ್ಯಚಿತ್ರಕಾರರ ಸಂಘ ಶನಿವಾರ ನಗರದಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ವ್ಯಂಗ್ಯಚಿತ್ರ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ವ್ಯಂಗ್ಯಚಿತ್ರಗಳು ಜನಸಾಮಾನ್ಯರ ಮನಸ್ಸನ್ನು ಬಿಂಬಿಸುವ ಕನ್ನಡಿಯಾದ ಕಾರಣದಿಂದಲೇ ಅದನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಆಳುವ ವರ್ಗ ಸದಾ ಯತ್ನಿಸುತ್ತಲೇ ಇರುತ್ತದೆ. ಈಗಾಗಲೇ ವ್ಯಂಗ್ಯಚಿತ್ರಗಳನ್ನು ಕೇವಲ ಚಿತ್ರವಾಗಿಸುವ ಹುನ್ನಾರ ನಡೆದಿದೆ ಎಂದರು.</p>.<p>ಇಂದು ವ್ಯಂಗ್ಯಚಿತ್ರಗಳನ್ನು ಬಿಟ್ಟ ಜಾಗವನ್ನು ತುಂಬುವ ಪದಾರ್ಥದಂತೆ ಬಳಸಲಾಗುತ್ತಿರುವುದು ದುರದೃಷ್ಟಕರ ಎಂದು ಹೇಳಿದರು.</p>.<p>ಪ್ರದರ್ಶನವನ್ನು ಉದ್ಘಾಟಿಸಿದ ವ್ಯಂಗ್ಯಚಿತ್ರಕಾರ ಬಿ.ವಿ. ಪಾಂಡುರಂಗ ರಾವ್ ಅವರು ವ್ಯಂಗ್ಯಚಿತ್ರಕಾರರ ಸಂಘ ನಡೆದು ಬಂದ ಹಾದಿಯನ್ನು ನೆನಪು ಮಾಡಿಕೊಂಡರು.</p>.<p>ವ್ಯಂಗ್ಯಚಿತ್ರಕಾರರ ಸಂಘದ ಅಧ್ಯಕ್ಷ ನಂಜುಂಡಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ವ್ಯಂಗ್ಯಚಿತ್ರ ಕ್ಷೇತ್ರದಲ್ಲಿ ಯುವ ತಲೆಮಾರು ಹೆಚ್ಚಿನ ಆಸಕ್ತಿ ವಹಿಸಲು ಸಾಧ್ಯವಾಗುವಂತೆ ವ್ಯಂಗ್ಯಚಿತ್ರ ಪ್ರದರ್ಶನ, ಸಂಕಿರಣ, ಕಮ್ಮಟಗಳನ್ನು ಆಯೋಜಿಸಲಾಗುವುದು’ ಎಂದರು.</p>.<p>ಹಿರಿಯ ವ್ಯಂಗ್ಯ ಚಿತ್ರಕಾರರಾದ ಬಿ.ಜಿ. ಗುಜ್ಜಾರಪ್ಪ, ವಿ.ಆರ್. ಸಿ ಶೇಖರ್, ರಾಮಧ್ಯಾನಿ, ಎಚ್.ಬಿ. ಮಂಜುನಾಥ್. ಜೇಮ್ಸ್ ವಾಜ್ ಅವರನ್ನು ಸನ್ಮಾನಿಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಎಸ್. ನಾಗನಾಥ್, ಸಂಕೇತ ಗುರುದತ್ತ, ಎಂ. ವಿಶ್ವನಾಥ್ ಉಪಸ್ಥಿತರಿದ್ದರು.</p>.<p>ವ್ಯಂಗ್ಯಚಿತ್ರ ಪ್ರದರ್ಶನವು ಫೆ.9ರವರೆಗೆ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>