‘ನಟ ವಿಜಯ್ ಹಾಗೂ ಅವರ ಕುಟುಂಬದವರು, ಬೇರೆಯವರಿಗೆ ಮಾದರಿ ಆಗಿರಬೇಕು. ಪದೇ ಪದೇ ಬೀದಿಗೆ ಬಂದು ಗಲಾಟೆ ಮಾಡುತ್ತಿದ್ದಾರೆ. ಠಾಣೆಗೂ ಬಂದು ದೂರಿನ ಮೇಲೆ ದೂರು ನೀಡುತ್ತಿದ್ದಾರೆ. ಅದರಿಂದ ಪೊಲೀಸರ ಸಮಯವೂ ವ್ಯರ್ಥವಾಗುತ್ತಿದೆ. ಅಕ್ಕ–ಪಕ್ಕದ ನಿವಾಸಿಗಳಿಗೂ ಕಿರಿಕಿರಿ ಉಂಟು ಮಾಡಿ, ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಹೀಗಾಗಿ, ಅವರಿಬ್ಬರ ಕುಟುಂಬದವರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದೇವೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.