ಬೆಂಗಳೂರು: 'ಕೋಲುಮಂಡೆ ಜಂಗಮದೇವ' ರ್ಯಾಪ್ ಹಾಡಿನಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತೆ ಚಿತ್ರೀಕರಿಸಲಾಗಿದೆ ಎಂದು ಆರೋಪಿಸಿ ರ್ಯಾಪರ್ ಚಂದನ್ ಶೆಟ್ಟಿ ವಿರುದ್ಧ ಮಲೆ ಮಹದೇಶ್ವರ ಸ್ವಾಮಿಯ ಭಕ್ತರು ಕಬ್ಬನ್ ಪಾರ್ಕ್ ಪೊಲೀಸರಿಗೆ ದೂರು ನೀಡಿದ್ದಾರೆ.
ಚಂದನ್ ಶೆಟ್ಟಿ ಸಂಯೋಜನೆಯಲ್ಲಿ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ರ್ಯಾಪ್ ಹಾಡಿನಲ್ಲಿ ಮಲೆಮಹದೇಶ್ವರ ಸ್ವಾಮಿಯ ಇತಿಹಾಸ ತಿರುಚಲಾಗಿದೆ ಎಂದು ಭಕ್ತರು ಆರೋಪಿಸಿದ್ದರು. ವಿವಾದ ಭುಗಿಲೆದ್ದ ಕೂಡಲೇ ಚಂದನ್ ಶೆಟ್ಟಿ ಕ್ಷಮೆಯಾಚಿಸಿದ್ದರು.
ದೂರು ಸ್ವೀಕರಿಸಿರುವ ಪೊಲೀಸರು ಎನ್ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಿಸಿಕೊಂಡು, ಕಾನೂನು ತಜ್ಞರ ಅಭಿಪ್ರಾಯ ಪಡೆಯಲು ನಿರ್ಧರಿಸಿದ್ದಾರೆ.