‘ಎಸಿಪಿ ಪಿ.ಟಿ.ಸುಬ್ರಹ್ಮಣ್ಯ, ಇನ್ಸ್ಪೆಕ್ಟರ್ಗಳಾದ ಸಿದ್ದರಾಜು, ಚಂದ್ರಶೇಖರ್ ಹಾಗೂ ಸಿಬ್ಬಂದಿ ಕರ್ತವ್ಯದಲ್ಲಿದ್ದರು. ಏ. 2ರಂದು ಸಂಜೆ 7.30ರ ಸುಮಾರಿಗೆ ಆರೋಪಿಗಳು ಫಾರ್ಚ್ಯೂನರ್ ಕಾರಿನಲ್ಲಿ ಬಂದಿದ್ದರು. ಎಸಿಪಿ ಹಾಗೂ ಸಿಬ್ಬಂದಿ ಅವರನ್ನು ತಡೆದಿದ್ದರು. ಅಷ್ಟಕ್ಕೆ ಕೋಪಗೊಂಡ ಆರೋಪಿಗಳು, ‘ನಾವು ಯಾರು ಎಂಬುದು ನಿನಗೆ ಗೊತ್ತಿಲ್ಲ. ಮುಖ್ಯಮಂತ್ರಿಗೆ ಹೇಳಿ ನಿನ್ನನ್ನು (ಎಸಿಪಿ) ನಾಳೆಯೇ ಸಸ್ಪೆಂಡ್ ಮಾಡಿಸುತ್ತೇವೆ. ನಿನ್ನನ್ನು ದೇವನಹಳ್ಳಿಯಲ್ಲಿ ಇರಲು ಬಿಡುವುದಿಲ್ಲ’ ಎಂದುಧಮ್ಕಿಹಾಕಿದ್ದರು. ಸಮವಸ್ತ್ರ ಹಿಡಿದು ಎಳೆದಾಡಿ ಕರ್ತವ್ಯಕ್ಕೂ ಅಡ್ಡಿಪಡಿಸಿದ್ದರು’ ಎಂದರು.