ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಎಂ ಹೆಸರಿನಲ್ಲಿ ಎಸಿಪಿಗೆ ಧಮ್ಕಿ

Last Updated 5 ಏಪ್ರಿಲ್ 2020, 2:32 IST
ಅಕ್ಷರ ಗಾತ್ರ

ಬೆಂಗಳೂರು: ನಿಷೇಧಾಜ್ಞೆ ಉಲ್ಲಂಘಿಸಿ ಕಾರಿನಲ್ಲಿ ಹೊರಟಿದ್ದ ತಮ್ಮನ್ನುತಡೆದು ನಿಲ್ಲಿಸಿದರೆಂಬ ಕಾರಣಕ್ಕೆ ಗ್ರಾನೈಟ್ ವ್ಯಾಪಾರಿಗಳಿಬ್ಬರು ಮುಖ್ಯಮಂತ್ರಿ ಹೆಸರು ಹೇಳಿಕೊಂಡು ದೇವನಹಳ್ಳಿ ಉಪವಿಭಾಗದ ಎಸಿಪಿ ಹಾಗೂ ಸಿಬ್ಬಂದಿಗೆಧಮ್ಕಿಹಾಕಿದ್ದು, ಈಸಂಬಂಧ ದೇವನಹಳ್ಳಿಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ದೇವನಹಳ್ಳಿಯ ರಾಣಿ ಕ್ರಾಸ್‌ನಲ್ಲಿರುವ ತಪಾಸಣಾ ಠಾಣೆಯಲ್ಲಿ ಏ.2ರಂದು ಈ ಘಟನೆ ನಡೆದಿದೆ. ಕರ್ತವ್ಯನಿರತ ಎಎಸ್‌ಐ ನಾಗರಾಜ ದೂರು ನೀಡಿದ್ದಾರೆ. ಅದನ್ನು ಆಧರಿಸಿ ಆರೋಪಿಗಳಾದ ವಿದ್ಯಾರಣ್ಯಪುರ ಬಳಿಯ ವಿರೂಪಾಕ್ಷಪುರದ ವೆಂಕಟೇಗೌಡ (51) ಹಾಗೂ ಬಿ.ರಾಮಕೃಷ್ಣ (48) ಎಂಬುವರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು. ‘ಆರೋಪಿಗಳು ಹಲವು ವರ್ಷಗಳಿಂದ ಗ್ರಾನೈಟ್ ವ್ಯಾಪಾರ ಮಾಡುತ್ತಿದ್ದಾರೆ. ಹಲವು ರಾಜಕೀಯ ಮುಖಂಡರ ಜೊತೆ ಒಡನಾಟ ಹೊಂದಿದ್ದಾರೆ. ಅದನ್ನೇ ಮುಂದಿಟ್ಟುಕೊಂಡು ಎಸಿಪಿ ಹಾಗೂ ಸಿಬ್ಬಂದಿಯನ್ನು ಬೆದರಿಸಿದ್ದರು’ ಎಂದು ತಿಳಿಸಿದರು.

‘ಎಸಿಪಿ ಪಿ.ಟಿ.ಸುಬ್ರಹ್ಮಣ್ಯ, ಇನ್‌ಸ್ಪೆಕ್ಟರ್‌ಗಳಾದ ಸಿದ್ದರಾಜು, ಚಂದ್ರಶೇಖರ್ ಹಾಗೂ ಸಿಬ್ಬಂದಿ ಕರ್ತವ್ಯದಲ್ಲಿದ್ದರು. ಏ. 2ರಂದು ಸಂಜೆ 7.30ರ ಸುಮಾರಿಗೆ ಆರೋಪಿಗಳು ಫಾರ್ಚ್ಯೂನರ್ ಕಾರಿನಲ್ಲಿ ಬಂದಿದ್ದರು. ಎಸಿಪಿ ಹಾಗೂ ಸಿಬ್ಬಂದಿ ಅವರನ್ನು ತಡೆದಿದ್ದರು. ಅಷ್ಟಕ್ಕೆ ಕೋಪಗೊಂಡ ಆರೋಪಿಗಳು, ‘ನಾವು ಯಾರು ಎಂಬುದು ನಿನಗೆ ಗೊತ್ತಿಲ್ಲ. ಮುಖ್ಯಮಂತ್ರಿಗೆ ಹೇಳಿ ನಿನ್ನನ್ನು (ಎಸಿಪಿ) ನಾಳೆಯೇ ಸಸ್ಪೆಂಡ್ ಮಾಡಿಸುತ್ತೇವೆ. ನಿನ್ನನ್ನು ದೇವನಹಳ್ಳಿಯಲ್ಲಿ ಇರಲು ಬಿಡುವುದಿಲ್ಲ’ ಎಂದುಧಮ್ಕಿಹಾಕಿದ್ದರು. ಸಮವಸ್ತ್ರ ಹಿಡಿದು ಎಳೆದಾಡಿ ಕರ್ತವ್ಯಕ್ಕೂ ಅಡ್ಡಿಪಡಿಸಿದ್ದರು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT