ಬೆಂಗಳೂರು: ‘ಹಲ್ಲೆ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸುವ ಬದಲು ಎನ್ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಿಸಲು ಪೊಲೀಸರ ಮೇಲೆ ಹಲಸೂರು ಗೇಟ್ ಉಪವಿಭಾಗ ಎಸಿಪಿ ನಜ್ಮಾ ಫಾರೂಖಿ ಒತ್ತಡ ಹೇರಿದ್ದು, ಈ ಮೂಲಕ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ’ ಎಂದು ಆರೋಪಿಸಿ ಉದ್ಯಮಿ ಇಮ್ರಾನ್ ಷರೀಫ್ ಎಂಬುವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ದೂರು ನೀಡಿದ್ದಾರೆ.