‘ಆಯೋಗ ನಮ್ಮ ಮನವಿಯನ್ನು ಪುರಸ್ಕರಿಸಿ, ಸಮೀಕ್ಷೆಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುತ್ತದೆ ಎಂದುಕೊಂಡಿದ್ದೇವೆ. ವಾರದವರೆಗೂ ಕಾಯುತ್ತೇವೆ. ಸಲ್ಲಿಸದಿದ್ದರೆ, ನಮ್ಮ ಒಕ್ಕೂಟದ ವತಿಯಿಂದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ’ ಎಂದು ಅವರು ಹೇಳಿದರು.