<p><strong>ಬೆಂಗಳೂರು:</strong> ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ವರದಿಯನ್ನು ತಕ್ಷಣ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಹಿಂದುಳಿದ ಜಾತಿಗಳ ಒಕ್ಕೂಟ ಒತ್ತಾಯಿಸಿದೆ.</p>.<p>ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಎಣ್ಣೆಗೆರೆ ಆರ್.ವೆಂಕಟರಾಮಯ್ಯ ಮತ್ತು ಉಪಾಧ್ಯಕ್ಷ ಎಂ.ರಾಮಯ್ಯ ಅವರಿದ್ದ ನಿಯೋಗ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎಚ್.ಕಾಂತರಾಜು ಅವರಿಗೆ ಬುಧವಾರ ಮನವಿ ಸಲ್ಲಿಸಿತು.</p>.<p>‘ಸರ್ಕಾರದ ಯೋಜನೆಗಳು ಅವಕಾಶ ವಂಚಿತ ಸಮುದಾಯಗಳಿಗೆ ತಲುಪಬೇಕಾದರೆ, ವರದಿ ಬಿಡುಗಡೆ ಮಾಡಬೇಕು. ಆಯೋಗದಿಂದ ವರದಿ ಪಡೆಯಲು ಸರ್ಕಾರ ಆಸಕ್ತಿ ತೋರಿಸುತ್ತಿಲ್ಲ. ಉದ್ದೇಶಪೂರ್ವಕವಾಗಿ ಹೀಗೆ ವರ್ತಿಸುತ್ತಿದೆ. ಆದ್ದರಿಂದ ಆಯೋಗಕ್ಕೆ ಮನವಿ ಸಲ್ಲಿಸಿದ್ದೇವೆ’ ಎಂದು ರಾಮಚಂದ್ರಪ್ಪ ತಿಳಿಸಿದರು.</p>.<p>‘ಆಯೋಗ ನಮ್ಮ ಮನವಿಯನ್ನು ಪುರಸ್ಕರಿಸಿ, ಸಮೀಕ್ಷೆಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುತ್ತದೆ ಎಂದುಕೊಂಡಿದ್ದೇವೆ. ವಾರದವರೆಗೂ ಕಾಯುತ್ತೇವೆ. ಸಲ್ಲಿಸದಿದ್ದರೆ, ನಮ್ಮ ಒಕ್ಕೂಟದ ವತಿಯಿಂದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ವರದಿಯನ್ನು ತಕ್ಷಣ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಹಿಂದುಳಿದ ಜಾತಿಗಳ ಒಕ್ಕೂಟ ಒತ್ತಾಯಿಸಿದೆ.</p>.<p>ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಎಣ್ಣೆಗೆರೆ ಆರ್.ವೆಂಕಟರಾಮಯ್ಯ ಮತ್ತು ಉಪಾಧ್ಯಕ್ಷ ಎಂ.ರಾಮಯ್ಯ ಅವರಿದ್ದ ನಿಯೋಗ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎಚ್.ಕಾಂತರಾಜು ಅವರಿಗೆ ಬುಧವಾರ ಮನವಿ ಸಲ್ಲಿಸಿತು.</p>.<p>‘ಸರ್ಕಾರದ ಯೋಜನೆಗಳು ಅವಕಾಶ ವಂಚಿತ ಸಮುದಾಯಗಳಿಗೆ ತಲುಪಬೇಕಾದರೆ, ವರದಿ ಬಿಡುಗಡೆ ಮಾಡಬೇಕು. ಆಯೋಗದಿಂದ ವರದಿ ಪಡೆಯಲು ಸರ್ಕಾರ ಆಸಕ್ತಿ ತೋರಿಸುತ್ತಿಲ್ಲ. ಉದ್ದೇಶಪೂರ್ವಕವಾಗಿ ಹೀಗೆ ವರ್ತಿಸುತ್ತಿದೆ. ಆದ್ದರಿಂದ ಆಯೋಗಕ್ಕೆ ಮನವಿ ಸಲ್ಲಿಸಿದ್ದೇವೆ’ ಎಂದು ರಾಮಚಂದ್ರಪ್ಪ ತಿಳಿಸಿದರು.</p>.<p>‘ಆಯೋಗ ನಮ್ಮ ಮನವಿಯನ್ನು ಪುರಸ್ಕರಿಸಿ, ಸಮೀಕ್ಷೆಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುತ್ತದೆ ಎಂದುಕೊಂಡಿದ್ದೇವೆ. ವಾರದವರೆಗೂ ಕಾಯುತ್ತೇವೆ. ಸಲ್ಲಿಸದಿದ್ದರೆ, ನಮ್ಮ ಒಕ್ಕೂಟದ ವತಿಯಿಂದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>