<p><strong>ಬೆಂಗಳೂರು</strong>: ಯಲಹಂಕದ ರೈಲ್ವೆ ವ್ಹೀಲ್ ಕಾರ್ಖಾನೆಯಲ್ಲಿ ಹಿರಿಯ ತಂತ್ರಜ್ಞರಾಗಿ ಕೆಲಸ ಮಾಡಿದ್ದ ಎಂ.ಬಸವಲಿಂಗಪ್ಪ ಅವರಿಗೆ ಜಾತಿ ನಿಂದನೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದ ಆರೋಪದಡಿ 16 ಮಂದಿ ವಿರುದ್ಧ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಕಾರ್ಖಾನೆಯಲ್ಲಿ 33 ವರ್ಷ ಕೆಲಸ ಮಾಡಿದ್ದೆ. ಉತ್ತಮ ಸೇವೆಗಾಗಿ ಪ್ರಶಸ್ತಿಯೂ ಬಂದಿತ್ತು. 2022ರ ಅಕ್ಟೋಬರ್ 19ರಂದು ಪದೋನ್ನತಿ ನೌಕರರ ಪಟ್ಟಿ ಬಂದಿತ್ತು. ಆ ಪಟ್ಟಿಯಲ್ಲಿ ನನ್ನ ಹೆಸರು ಇತ್ತು. ಆಗ, ಯಾವುದೇ ಪದೋನ್ನತಿ ಹಾಗೂ ವೇತನ ಮುಂಬಡ್ತಿ ನೀಡದೇ ಕಾರ್ಖಾನೆಯಿಂದ ಹೊರಕ್ಕೆ ಹಾಕುತ್ತೇವೆ ಎಂದು ಬೆದರಿಸಿದ್ದರು. ಶರ್ಟ್ನ ಕಾಲರ್ ಹಿಡಿದುಕೊಂಡು ಜಾತಿ ನಿಂದನೆ ಮಾಡಿದ್ದರು’ ಎಂದು ಬಸವಲಿಂಗಪ್ಪ ಅವರು ನೀಡಿದ ದೂರು ಆಧರಿಸಿ ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.</p>.<p>‘ಪದೋನ್ನತಿ ನೀಡದೇ ರೈಲ್ವೆ ಕಾಯ್ದೆ–1989 ಅನ್ನು ಉಲ್ಲಂಘನೆ ಮಾಡಿದ್ದಾರೆ. ಅಲ್ಲದೇ ಕೊಲೆಗೂ ಸಂಚು ರೂಪಿಸಿದ್ದರು’ ಎಂಬುದಾಗಿ ದೂರು ನೀಡಿದ್ದಾರೆ.</p>.<p>‘ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರುದಾರ, 71ನೇ ಸಿಸಿಎಚ್ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ನ್ಯಾಯಾಲಯದ ಸೂಚನೆ ಮೇರೆಗೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಯಲಹಂಕದ ರೈಲ್ವೆ ವ್ಹೀಲ್ ಕಾರ್ಖಾನೆಯಲ್ಲಿ ಹಿರಿಯ ತಂತ್ರಜ್ಞರಾಗಿ ಕೆಲಸ ಮಾಡಿದ್ದ ಎಂ.ಬಸವಲಿಂಗಪ್ಪ ಅವರಿಗೆ ಜಾತಿ ನಿಂದನೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದ ಆರೋಪದಡಿ 16 ಮಂದಿ ವಿರುದ್ಧ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಕಾರ್ಖಾನೆಯಲ್ಲಿ 33 ವರ್ಷ ಕೆಲಸ ಮಾಡಿದ್ದೆ. ಉತ್ತಮ ಸೇವೆಗಾಗಿ ಪ್ರಶಸ್ತಿಯೂ ಬಂದಿತ್ತು. 2022ರ ಅಕ್ಟೋಬರ್ 19ರಂದು ಪದೋನ್ನತಿ ನೌಕರರ ಪಟ್ಟಿ ಬಂದಿತ್ತು. ಆ ಪಟ್ಟಿಯಲ್ಲಿ ನನ್ನ ಹೆಸರು ಇತ್ತು. ಆಗ, ಯಾವುದೇ ಪದೋನ್ನತಿ ಹಾಗೂ ವೇತನ ಮುಂಬಡ್ತಿ ನೀಡದೇ ಕಾರ್ಖಾನೆಯಿಂದ ಹೊರಕ್ಕೆ ಹಾಕುತ್ತೇವೆ ಎಂದು ಬೆದರಿಸಿದ್ದರು. ಶರ್ಟ್ನ ಕಾಲರ್ ಹಿಡಿದುಕೊಂಡು ಜಾತಿ ನಿಂದನೆ ಮಾಡಿದ್ದರು’ ಎಂದು ಬಸವಲಿಂಗಪ್ಪ ಅವರು ನೀಡಿದ ದೂರು ಆಧರಿಸಿ ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.</p>.<p>‘ಪದೋನ್ನತಿ ನೀಡದೇ ರೈಲ್ವೆ ಕಾಯ್ದೆ–1989 ಅನ್ನು ಉಲ್ಲಂಘನೆ ಮಾಡಿದ್ದಾರೆ. ಅಲ್ಲದೇ ಕೊಲೆಗೂ ಸಂಚು ರೂಪಿಸಿದ್ದರು’ ಎಂಬುದಾಗಿ ದೂರು ನೀಡಿದ್ದಾರೆ.</p>.<p>‘ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರುದಾರ, 71ನೇ ಸಿಸಿಎಚ್ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ನ್ಯಾಯಾಲಯದ ಸೂಚನೆ ಮೇರೆಗೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>